September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಬಾರ್ಡ್ ಜಲಾನಯನ ಅಭಿವೃದ್ಧಿ ನಿಧಿ ಅಡಿಯಲ್ಲಿ ಪೆರ್ನೇಲೆ ಸ್ಪ್ರಿಂಗ್ ಶೆಡ್ ಯೋಜನೆಯ ಉದ್ಘಾಟನೆ ಹಾಗೂ ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ ಕಾರ್ಯಕ್ರಮ ಎ.18 ರಂದು ತೋಟತ್ತಾಡಿ ಗ್ರಾಮದ ಪೆರ್ನೇಲೆ ಕೆರೆ ಆವರಣದಲ್ಲಿ ನಡೆಯಿತು.

ಶಾಸಕ ಹರೀಶ್ ಪೂಂಜ ಸ್ಪ್ರಿಂಗ್ ಶೆಡ್ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿ ಈ ಕೆರೆ ಅಭಿವೃದ್ಧಿಯಿಂದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಅಂತರ್ಜಲ ಸಮೃದ್ಧಿಗೊಳ್ಳಲಿದೆ ಎಂದು ಅಭಿಪ್ರಾಯಪಟ್ಟ ಅವರು ಕೆರೆ ಅಭಿವೃದ್ಧಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ಶಿಲಾನ್ಯಾಸ ನೇರವೇರಿಸಿದರು.

ತೋಟತ್ತಾಡಿ ಗ್ರಾಮದ 27.47ಎಕರೆ ಪ್ರದೇಶದಲ್ಲಿರುವ ಪೆರ್ನಾಳೆ ಕೆರೆ ೩೦೦ಕ್ಕೂ ಅಧಿಕ ಕುಟುಂಬಗಳ ಕೃಷಿಗೆ ಜೀವಾಳವಾಗಿದೆ. ಪುರಾತನ ಕಾಲದ ಈ ಕೆರೆ ಅಭಿವೃದ್ಧಿಗೊಳ್ಳುವುದರಿಂದ ಇನ್ನಷ್ಟು ಕುಟುಂಬಗಳಿಗೆ ಅನುಕೂಲವಾಗುವುದರ ಜತೆಗೆ ಹೆಚ್ಚಿನ ಸಮಯ ನೀರು ಹರಿದು ಬರಲಿದೆ. ಈ ಕೆರೆಯ ಅಭಿವೃದ್ಧಿಗೆ ಪಂಚಾಯಿತಿ ೩ ವರ್ಷಗಳ ಹಿಂದೆ ನಬಾರ್ಡ್ಗೆ ಮನವಿ ಸಲ್ಲಿಸಿತು. ನಬಾರ್ಡ್ ಅಧಿಕಾರಿಗಳ ತಂಡ ಇಲ್ಲಿಗೆ ಆಗಮಿಸಿ ಅಧ್ಯಯನ ನಡೆಸಿ ಕೆರೆ ಅಭಿವೃದ್ಧಿಯಿಂದ ೩೫೦ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ಅನುಕೂಲವಾಗಲಿದೆ ಎಂಬುದನ್ನು ಮನಗಂಡು ಈ ಯೋಜನೆ ಕೈಗೆತ್ತಿಕೊಂಡಿದೆ. ಗ್ರಾಮಸ್ಥರ ಸಭೆ ಕರೆದು ಸಮಿತಿ ರಚಿಸಿ ಊರಿನವರಿಂದಲೂ ಒಪ್ಪಿಗೆ ಪಡೆಯ ಲಾಗಿದೆ. ಈ ಕುರಿತು ಸುದ್ದಿ ಉದಯ ಪತ್ರಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.

ಕೆರೆ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜರು ಶಾಸಕ ನಿಧಿಯಿಂದ 5 ಲಕ್ಷ ರೂ..ಅನುದಾನ ಒದಗಿಸಿದ ಶಾಸಕರಿಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದರು. ಜಲಾನಯನ ಅಭಿವೃದ್ಧಿ ನಿಧಿಯಿಂದ 16 ಲಕ್ಷ ರೂ.ಅನುದಾನ ಒದಗಿಸಲಾಗಿದ್ದು ಅಭಿವೃದ್ಧಿ ಕಾಮಗಾರಿ ವೇಗ ಪಡೆಯಲಿದೆ. 90 ಲಕ್ಷ ರೂ. ವೆಚ್ಚದ ಯೋಜನೆ ಇದಾಗಿದೆ.

ಜಿಲ್ಲಾ ನಬಾರ್ಡ್ ಎಜಿಎಂ(ಡಿಡಿ) ಸಂಗೀತಾ ಎಸ್.ಕರ್ತಾ ಅಧ್ಯಕ್ಷತೆ ವಹಿಸಿದ್ದರು. ಸಿಆರ್‌ಡಿ ಸಂಸ್ಥೆಯ ನಿರ್ದೇಶಕ ಶಾಜಿ, ಸಂಯೋಜಕ ನಾರಾಯಣ, ಪ್ರತಿನಿಧಿ ರಾಜೇಶ್, ಪೆನೇಲೆ ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಸಾದ್ ಕೆ.ವಿ., ನವೀನ್ ನೆರಿಯ, ತಾ.ಪಂ.ಮಾಜಿ ಸದಸ್ಯ ಕೊರಗಪ್ಪ ಗೌಡ, ಗ್ರಾ.ಪಂ.ಮಾಜಿ ಸದಸ್ಯ ಅವಿನಾಶ್ ಹಾಗೂ ಗುತ್ತಿಗೆದಾರ ಪ್ರಜೀತ್ ಉಪಸ್ಥಿತರಿದ್ದರು. ಒಬ್ಬಯ್ಯ ಸ್ವಾಗತಿಸಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ವಂದಿಸಿ, ನಿರೂಪಿಸಿದರು. ಕೆರೆ ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಗ್ರಾಮಸ್ಥರು ಭಾಗವಹಿಸಿದ್ದರು.

Related posts

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಾಂತಿ ಹಾಗೂ ವಾರ್ಷಿಕ ಜಾತ್ರೋತ್ಸವ ಸಮಿತಿಯ ಪೂರ್ವಭಾವಿ ಸಭೆ

Suddi Udaya

ಉಜಿರೆ:ಎಸ್ ಡಿ ಎಮ್ ನಲ್ಲಿ ನೆನಪಿನಂಗಳ ಕಾರ್ಯಕ್ರಮ

Suddi Udaya

ಸೆ.17: ದೈವ ಕ್ಷೇತ್ರ ಬಡೆಕ್ಕಾವಿನಲ್ಲಿ ಉಚಿತ ಕಣ್ಣಿನ ಪರೀಕ್ಷೆ ಹಾಗೂ ಕನ್ನಡಕ ವಿತರಣೆ

Suddi Udaya

ಮಾ.10: ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು,ಓಡಿಲ್ನಾಳ ಗ್ರಾಮ ಸಮಿತಿಯಿಂದ ಸಮಾಲೋಚನೆ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya
error: Content is protected !!