25.4 C
ಪುತ್ತೂರು, ಬೆಳ್ತಂಗಡಿ
June 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

ಬೆಳ್ತಂಗಡಿ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು ಮಹಿಳೆಯರಿಗೆ ಮಾಡಿದ ದ್ರೋಹದ ಜೊತೆಗೆ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಟುವಾಗಿ ಟೀಕಿಸಿದ್ದಾರೆ.

ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿರುವುದು ಕಾಂಗ್ರೆಸ್ ಗೆ ರಕ್ತಗತ ಚಾಳಿಯಾಗಿದೆ. ಅನೇಕ ಬಾರಿ 356ನೇ ವಿಧಿ ಪ್ರಯೋಗಿಸಿ ಚುನಾಯಿತ ಸರಕಾರಗಳ ವಜಾ, 1975ರಲ್ಲಿ ಅಲಹಾಬಾದ್ ಉಚ್ಚ ತೀರ್ಪಿಗೆ ವ್ಯತಿರಿಕ್ತವಾಗಿ ತುರ್ತು ಪರಿಸ್ಥಿತಿ ಘೋಷಣೆ, ರಾಜ್ಯಪಾಲರನ್ನು ಕೈಗೊಂಬೆ ಮಾಡಿ ಸಂವಿಧಾನ ಬಾಹಿರ ಕೃತ್ಯ ಎಸಗುವುದು ಕಾಂಗ್ರೆಸ್ ನ ಚರಿತ್ರೆಯ ಕರಾಳ ಮುಖವಾಗಿದೆ. ಇದೀಗ ತಾನೇ ಈ ಹಿಂದೆ ತರಲೆತ್ನಿಸಿದ ಮಹಿಳಾ ಮೀಸಲಾತಿ ಮಸೂದೆಗೆ ನರೇಂದ್ರ ಮೋದಿಯನ್ನು ವಿರೋಧಿಸುವ ಏಕೈಕ ಕಾರಣಕ್ಕೆ ತಡೆಹಿಡಿದಿದ್ದು ಮಹಿಳೆಯರ ಪರ ಕಾಂಗ್ರೆಸ್ ಪಕ್ಷ ನಿಲುವು ಏನೆಂಬುದು ಬಟಾಬಯಲಾಗಿದೆ.

ತಂತ್ರಜ್ಞಾನ ಯುಗದಡೆಗೆ ದಾಪುಗಾಲಿಡುವ ಇಂದಿನ ದಿನದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ (ಇವಿಎಂ) ವಿದ್ಯುನ್ಮಾನ ಮತಯಂತ್ರದಿಂದ ಬ್ಯಾಲೆಟ್ ಪೇಪರ್ ಗೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಉದ್ದೇಶಿಸಿದೆ. ಇಂತಹ ಮನಸ್ಥಿತಿಯಿರುವ ಕಾಂಗ್ರೆಸ್ ಪಕ್ಷದ ಜನ ಪ್ರತಿನಿಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯವೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಬಳಂಜ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ವರ್ಗಾವಣೆ: ಪಂಚಾಯತ್ ವತಿಯಿಂದ ವಿವಿಧ ಸಂಘ ಸಂಸ್ಥೆಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಗುರುವಾಯನಕರೆ ವ್ಯಾಪ್ತಿಯ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟಗಳ ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶ

Suddi Udaya

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya
error: Content is protected !!