September 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

ಬೆಳ್ತಂಗಡಿ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು ಮಹಿಳೆಯರಿಗೆ ಮಾಡಿದ ದ್ರೋಹದ ಜೊತೆಗೆ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಟುವಾಗಿ ಟೀಕಿಸಿದ್ದಾರೆ.

ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿರುವುದು ಕಾಂಗ್ರೆಸ್ ಗೆ ರಕ್ತಗತ ಚಾಳಿಯಾಗಿದೆ. ಅನೇಕ ಬಾರಿ 356ನೇ ವಿಧಿ ಪ್ರಯೋಗಿಸಿ ಚುನಾಯಿತ ಸರಕಾರಗಳ ವಜಾ, 1975ರಲ್ಲಿ ಅಲಹಾಬಾದ್ ಉಚ್ಚ ತೀರ್ಪಿಗೆ ವ್ಯತಿರಿಕ್ತವಾಗಿ ತುರ್ತು ಪರಿಸ್ಥಿತಿ ಘೋಷಣೆ, ರಾಜ್ಯಪಾಲರನ್ನು ಕೈಗೊಂಬೆ ಮಾಡಿ ಸಂವಿಧಾನ ಬಾಹಿರ ಕೃತ್ಯ ಎಸಗುವುದು ಕಾಂಗ್ರೆಸ್ ನ ಚರಿತ್ರೆಯ ಕರಾಳ ಮುಖವಾಗಿದೆ. ಇದೀಗ ತಾನೇ ಈ ಹಿಂದೆ ತರಲೆತ್ನಿಸಿದ ಮಹಿಳಾ ಮೀಸಲಾತಿ ಮಸೂದೆಗೆ ನರೇಂದ್ರ ಮೋದಿಯನ್ನು ವಿರೋಧಿಸುವ ಏಕೈಕ ಕಾರಣಕ್ಕೆ ತಡೆಹಿಡಿದಿದ್ದು ಮಹಿಳೆಯರ ಪರ ಕಾಂಗ್ರೆಸ್ ಪಕ್ಷ ನಿಲುವು ಏನೆಂಬುದು ಬಟಾಬಯಲಾಗಿದೆ.

ತಂತ್ರಜ್ಞಾನ ಯುಗದಡೆಗೆ ದಾಪುಗಾಲಿಡುವ ಇಂದಿನ ದಿನದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ (ಇವಿಎಂ) ವಿದ್ಯುನ್ಮಾನ ಮತಯಂತ್ರದಿಂದ ಬ್ಯಾಲೆಟ್ ಪೇಪರ್ ಗೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಉದ್ದೇಶಿಸಿದೆ. ಇಂತಹ ಮನಸ್ಥಿತಿಯಿರುವ ಕಾಂಗ್ರೆಸ್ ಪಕ್ಷದ ಜನ ಪ್ರತಿನಿಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯವೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 2024-25 ಸಾಲಿನ ಅಂತಿಮ ವರ್ಷದ ಪರೀಕ್ಷೆ: ಉಜಿರೆ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇಕಡಾ 100 ಫಲಿತಾಂಶ

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಎನ್ ಎಸ್ ಎಸ್ ಘಟಕದಿಂದ ಕೃಷಿ ಮಾಹಿತಿ ಮತ್ತು ಕೆಸರು ಗದ್ದೆ ಕೂಟ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಹಾಗೂ ಜಾನುವಾರು ಆರೋಗ್ಯ ಮಾಹಿತಿ ಶಿಬಿರ

Suddi Udaya
error: Content is protected !!