ಬೆಳ್ತಂಗಡಿ: ಬಳಂಜ ಶಿಕ್ಷಣ ಟ್ರಸ್ಟ್ (ರಿ) ಬಳಂಜ ವತಿಯಿಂದ ಬಳಂಜ ಶಾಲಾ ಕ್ರೀಡಾಂಗಣ ಅಬಿವೃದ್ದಿಗೆ ಶಾಸಕ ಹರೀಶ್ ಪೂಂಜರಿಗೆ ಎ.19ರಂದು ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ನ ಅಧ್ಯಕ್ಷ ,ಪತ್ರಕರ್ತ ಮನೋಹರ್ ಬಳಂಜ,ಟ್ರಸ್ಟ್ ನ ಕಾರ್ಯದರ್ಶಿ ರತ್ನರಾಜ್ ಜೈನ್ ಪೇರಂದಬೈಲ್, ಟ್ರಸ್ಟಿಗಳಾದ ಸಂತೋಷ್ ಕುಮಾರ್ ಕಾಪಿನಡ್ಕ, ಪ್ರವೀಣ್ ಕುಮಾರ್ ಹೆಚ್ ಎಸ್, ಬಳಂಜ ಶಾಲಾ ಹಳೆ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ,ಪತ್ರಕರ್ತ ಸಂತೋಷ್ ಪಿ ಕೋಟ್ಯಾನ್,ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಕಾರ್ಯದರ್ಶಿ ರಂಜಿತ್ ಪೂಜಾರಿ ಉಪಸ್ಥಿತರಿದ್ದರು.












