August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯರಾಜ್ಯ ಸುದ್ದಿವರದಿ

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

ಬೆಳ್ತಂಗಡಿ: ಬದಲಾಗುತ್ತಿರುವ ಕಾಲಘಟ್ಟದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನಲ್ಲಿ ಶೇ.33 ಮಹಿಳೆಯರಿಗೆ ಮೀಸಲಿಡುವ ಐತಿಹಾಸಿಕ ಮಸೂದೆಯನ್ನು ಲೋಕಸಭೆಯಲ್ಲಿ ಮೂರನೇ ಎರಡು ಬಹುಮತ ಪಡೆಯದಂತೆ ತಡೆಯೊಡ್ಡಿ ಇದೀಗ ವಿಘ್ನ ಸಂತೋಷಿಗಳಂತೆ ಸಂಭ್ರಮ ಆಚರಿಸುತ್ತಿರುವುದು ಮಹಿಳೆಯರಿಗೆ ಮಾಡಿದ ದ್ರೋಹದ ಜೊತೆಗೆ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಕಟುವಾಗಿ ಟೀಕಿಸಿದ್ದಾರೆ.

ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವದ ಕಗ್ಗೊಲೆ ನಡೆಸುತ್ತಿರುವುದು ಕಾಂಗ್ರೆಸ್ ಗೆ ರಕ್ತಗತ ಚಾಳಿಯಾಗಿದೆ. ಅನೇಕ ಬಾರಿ 356ನೇ ವಿಧಿ ಪ್ರಯೋಗಿಸಿ ಚುನಾಯಿತ ಸರಕಾರಗಳ ವಜಾ, 1975ರಲ್ಲಿ ಅಲಹಾಬಾದ್ ಉಚ್ಚ ತೀರ್ಪಿಗೆ ವ್ಯತಿರಿಕ್ತವಾಗಿ ತುರ್ತು ಪರಿಸ್ಥಿತಿ ಘೋಷಣೆ, ರಾಜ್ಯಪಾಲರನ್ನು ಕೈಗೊಂಬೆ ಮಾಡಿ ಸಂವಿಧಾನ ಬಾಹಿರ ಕೃತ್ಯ ಎಸಗುವುದು ಕಾಂಗ್ರೆಸ್ ನ ಚರಿತ್ರೆಯ ಕರಾಳ ಮುಖವಾಗಿದೆ. ಇದೀಗ ತಾನೇ ಈ ಹಿಂದೆ ತರಲೆತ್ನಿಸಿದ ಮಹಿಳಾ ಮೀಸಲಾತಿ ಮಸೂದೆಗೆ ನರೇಂದ್ರ ಮೋದಿಯನ್ನು ವಿರೋಧಿಸುವ ಏಕೈಕ ಕಾರಣಕ್ಕೆ ತಡೆಹಿಡಿದಿದ್ದು ಮಹಿಳೆಯರ ಪರ ಕಾಂಗ್ರೆಸ್ ಪಕ್ಷ ನಿಲುವು ಏನೆಂಬುದು ಬಟಾಬಯಲಾಗಿದೆ.

ತಂತ್ರಜ್ಞಾನ ಯುಗದಡೆಗೆ ದಾಪುಗಾಲಿಡುವ ಇಂದಿನ ದಿನದಲ್ಲಿ ಕರ್ನಾಟಕದ ಕಾಂಗ್ರೆಸ್ ಸರಕಾರ (ಇವಿಎಂ) ವಿದ್ಯುನ್ಮಾನ ಮತಯಂತ್ರದಿಂದ ಬ್ಯಾಲೆಟ್ ಪೇಪರ್ ಗೆ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸಲು ಉದ್ದೇಶಿಸಿದೆ. ಇಂತಹ ಮನಸ್ಥಿತಿಯಿರುವ ಕಾಂಗ್ರೆಸ್ ಪಕ್ಷದ ಜನ ಪ್ರತಿನಿಧಿಗಳಿಂದ ಇನ್ನೇನು ನಿರೀಕ್ಷಿಸಲು ಸಾಧ್ಯವೆಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಹಾಸನ ಜಿಲ್ಲಾ ರಾಷ್ಟ್ರೀಯ ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರಾಗಿ ಶಿವಪ್ರಸಾದ್ ಅಜಿಲರಿಗೆ ಹೆಚ್ಚುವರಿ ಜವಾಬ್ದಾರಿ: ಇಂದು ಅಧಿಕಾರ ಸ್ವೀಕಾರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ರೂ.5 ಲಕ್ಷ ರೂ. ಹಸ್ತಾಂತರ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಬಣಕಲ್ ಸಾಯಿಕೃಷ್ಣ ಹೆಲ್ತ್ ಸೆಂಟರ್ ನಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ನೇತ್ರ ತಪಾಸಣೆ ಶಿಬಿರ

Suddi Udaya
error: Content is protected !!