ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಝೇಂಕಾರ ಬೇಸಿಗೆ ಶಿಬಿರ ಉದ್ಘಾಟನೆ

ಬೆಳ್ತಂಗಡಿ : ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವು ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಸಹಭಾಗಿತ್ವದೊಂದಿಗೆ ಪಿಎಂ ಶ್ರೀ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ನೇರವೇರಿತು.

ಜೇಸಿರೆಟ್ ಪೂರ್ವ ಅಧ್ಯಕ್ಷರಾದ ಶಿಕ್ಷಕಿ ಅನುರಾಧ ಸುಭಾಷ್ ಚಂದ್ರ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಪ್ರೇರಣಾತ್ಮಕ ಮಾತುಗಳ ಮೂಲಕ ಸ್ಪೂರ್ತಿ ತುಂಬಿದರು ನಮ್ಮಲ್ಲಿರುವ ಸಕಾರಾತ್ಮಕ ಚಿಂತನೆ ಪ್ರೀತಿ ಭಾಂದವ್ಯಗಳ ಮೂಲಕ ಸಮಾಜದಲ್ಲಿ ಒಳ್ಳೆಯ ವಾತಾವರಣವನ್ನು ನಿರ್ಮಿಸಬಹುದು ಎಂದು ಹೇಳಿದ ಅವರು ಬೇಸಿಗೆ ಶಿಬಿರದ ಯಶಸ್ಸಿಗೆ ಶುಭ ಹಾರೈಸಿದರು. ವೇದಿ ಕೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವೃತ್ತಿಯಲ್ಲಿ ಶಿಕ್ಷಕರು ಹಾಗೂ ಕಲಾವಿದರಾದ ತೇಜಸ್ವಿ ಅಂಬೆಕಲ್ಲು ಪೋಷಕರು ಬಾಲ್ಯದಲ್ಲಿಯೇ ಮಕ್ಕಳಿಗೆ ಸಕರಾತ್ಮಕ ಚಿಂತನೆ ತುಂಬಿದಾಗ ಅದು ಅವರ ಜೀವನದ ಯಶಸ್ವಿಗೆ ಬುನಾದಿ ಯಾಗುತ್ತದೆ ಎಂದು ಹೇಳಿದ ಅವರು ಜೆಸಿಐ ಘಟಕದ ಚಟುವಟಿಕೆಗಳ ಕುರಿತು ಶ್ಲಾಘನೆ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿ ಘಟಕಾಧ್ಯಕ್ಷ ಜಿತೇಶ್ ಕುಮಾರ್ ವಹಿಸಿದ್ದು ಪ್ರಾಸ್ತಾವಿಕ ಮಾತಿನೊಂದಿಗೆ ಸರ್ವರನ್ನು ಸ್ವಾಗತಿಸಿದರು. ಜೆಜೆಸಿ ಅಧ್ಯಕ್ಷ ತೇಜಸ್ ಉಪಸ್ಥಿತರಿದ್ದರು. ಜೇಸಿರೆಟ್ ಪೂರ್ವಾಧ್ಯಕ್ಷೆ ನಮಿತಾ ನಿರ್ಮಲ್ ಕುಮಾರ್ ರವರು ಗಣ್ಯರನ್ನು ವೇದಿಕೆಗೆ ಆಹ್ವಾನಿಸಿದರು.

ನವ್ಯರವರು ಉದ್ಘಾಟಕರ ಪರಿಚಯ ಮಾಡಿದರು.ವೈಷ್ಣವಿ ಭಟ್ ರವರ ಜೆಸಿ ವಾಣಿಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಶಿಬಿರದ ಆಯೋಜಕರಾದ ಜೆಸಿ ಹೇಮಾವತಿ ಕೆ ಇವರು ಶಿಬಿರದ ರೂಪುರೇಷೆಯನ್ನು ವಿವರಿಸಿ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಜೆಸಿ ಪೂರ್ವ ಅಧ್ಯಕ್ಷರಾದ ಸುಭಾಶ್ಚಂದ್ರ ಎಂ ಪಿ ಚಿದಾನಂದ ಇಡ್ಯಾ,ನಾರಾಯಣಶೆಟ್ಟಿ ಪೂರ್ವಾಧ್ಯಕ್ಷೆಯರಾದ ಪವಿತ್ರ ಚಿದಾನಂದ್, ದೀಪ ಕಿರಣ್ ಹಾಗೂ ಶಿಬಿರಾರ್ಥಿಗಳ ಪೋಷಕ ಬಂಧುಗಳು,ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Related posts

ಯಾರದ್ದೋ ಓಲೈಕೆಗಾಗಿ ಸರ್ಕಾರದ ತೀರ್ಮಾನಗಳು: ಮತಾಂತರ ನಿಷೇಧ ಕಾಯಿದೆ ವಾಪಸ್ಸಿಗೆ ಬಿ.ಜೆ.ಪಿ ವಿರೋಧ

Suddi Udaya

ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಕಳಿಯ ಸಹಕಾರಿ ಸಂಘದಿಂದ ಬೆಳೆ ವಿಮೆ, ಬೆಳೆ ಸಮೀಕ್ಷೆ, ಕೃಷಿ ಮಾಹಿತಿ

Suddi Udaya

ಮುಂಡಾಜೆ ಮತ್ತು ಕಲ್ಮಂಜದಲ್ಲಿ ಸಂಪರ್ಕ ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿಗಳಿಗೆ ಅನುದಾನ ಪೂರೈಸಿದ ಶಾಸಕ ಹರೀಶ್ ಪೂಂಜ

Suddi Udaya

ಪುಂಜಾಲಕಟ್ಟೆ  ಕರ್ನಾಟಕ ಪಬ್ಲಿಕ್ ಶಾಲೆ : ಶಾಲಾ ಪ್ರಾರಂಭೋತ್ಸವ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya
error: Content is protected !!