July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

ಉಜಿರೆ: NABH ಪುರಸ್ಕೃತ ಉಜಿರೆಯ ಬೆನಕ  ಹೆಲ್ತ್ ಸೆಂಟರ್ ನಲ್ಲಿ  ಎ.19ರಂದು  ಆದಿತ್ಯವಾರ ಆಸ್ಪತ್ರೆಯ ಔಷಧಾಲಯವನ್ನು  ನೂತನವಾಗಿ ಸಜ್ಜುಗೊಂಡ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಸ್ಥಳಾಂತರಗೊಂಡ ಔಷಧಾಲಯ (ಫಾರ್ಮಸಿ)ಯನ್ನು ಹಿರಿಯ ಸೀತಾರಾಮ ಭಟ್ ಕೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ. ಕೆ ಮಾತನಾಡಿ ನಮ್ಮ ಆಸ್ಪತ್ರೆಯ ಔಷಧಾಲಯವನ್ನು ವಿನೂತನವಾಗಿ ನಿರ್ಮಿಸಿದ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಿ ದಿನದ 24 ಗಂಟೆಗಳ ಕಾಲ  (24×7) ಈ ಭಾಗದ ಸಾರ್ವಜನಿಕರಿಗೆ ಸೇವೆ ಸಲ್ಲಿಸಬೇಕೆಂಬ ನನ್ನ ಕನಸು ಈ ದಿನ ನನಸಾಗಿದೆ ಎಂದರೆ ಅತಿಶಯೋಕ್ತಿಯಲ್ಲ ಯಾಕೆಂದರೆ ಔಷಧಾಲಯವು  ಯಾವುದೇ ಆಸ್ಪತ್ರೆಯ ಜೀವನಾಡಿಯಾಗಿರುತ್ತದೆ. ರೋಗಿಗಳಿಗೆ ಕ್ಲಿಷ್ಟ ಸಮಯದಲ್ಲಿ ಔಷಧಿಗಳನ್ನು ವಿತರಿಸಲು ಈಗಿನ ವ್ಯವಸ್ಥೆ ತುಂಬ ಅನುಕೂಲವಾಗಿದೆ ಎಂದು ತಿಳಿಸಿದರು.

ಉದ್ಘಾಟಕರಾದ ಸೀತಾರಾಮ ಭಟ್ ಕೆ ಇವರು ಆಸ್ಪತ್ರೆಯ ಏಳಿಗೆಯಲ್ಲಿ ಇದೊಂದು ಮಹತ್ವದ ಹೆಜ್ಜೆ ಮತ್ತು ಇದರಿಂದ ಎಲ್ಲರಿಗೂ ಅನುಕೂಲವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಾ.ಭಾರತಿ ಜಿ.ಕೆ, ಡಾ. ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ನವ್ಯ ಭಟ್,   ಡಾ. ಶ್ರೀಹರ್ಷ ತುಲುಪುಲೆ, ಡಾ. ದೀಕ್ಷಿತ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಸಹಾಯಧನ ಹಸ್ತಾಂತರ

Suddi Udaya

ಬದಿಯಡ್ಕದಲ್ಲಿ ಕಾರು ಅಪಘಾತ: ಬೆಳ್ತಂಗಡಿಯ ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ಸ್ಥಳಾಂತರಗೊಂಡ ಕಛೇರಿ ಉದ್ಘಾಟನೆ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya
error: Content is protected !!