September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಸದಾನಂದ ಪೂಜಾರಿಯವರಿಗೆ ಸನ್ಮಾನ

ತೆಂಕಕಾರಂದೂರು: ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೆನ್ಲಾಕ್ ಆಸ್ಪತ್ರೆಯ ಖ್ಯಾತ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿಯವರನ್ನು ತೆಂಕಕಾರಂದೂರುವಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ನಾಗಾರತಿ ಯಕ್ಷಗಾನದ ಯಕ್ಷರಂಗ ವೇದಿಕೆಯಲ್ಲಿ ಎ 19ರಂದು ಗೌರವಿಸಿ, ಸನ್ಮಾನಿಸಲಾಯಿತು.

ಡಾ. ಸದಾನಂದ ಪೂಜಾರಿಯವರ ಸಾಧನೆ ಬಗ್ಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಮಾತನಾಡಿದರು.

ಈ ಸಂದರ್ಭದಲ್ಲಿ ಮಾಯಿಲಪ್ಪ ಪೂಜಾರಿ ದಂಪತಿ, ರಮಾನಾಥ ರೈ, ಶೀಲಾವತಿ ಲಿಂಗಪ್ಪ ಪೂಜಾರಿ, ಉದ್ಯಮಿ ಸಂತೋಷ್ ಹೆಗ್ಡೆ, ಮಾರುತಿ ನಿಲಯ,ಗುತ್ತಿಗೆದಾರ ರಫೀಕ್ ತೆಂಕಕಾರಂದೂರು, ಉದ್ಯಮಿ ಖಾಸಿಂ ಕಟ್ಟೆ, ವಿಷ್ಣು ಸಂಪಿಗೆತ್ತಾಯ ದಂಪತಿ, ಉದ್ಯಮಿ ಜಿನ್ನಪ್ಪ ಪೂಜಾರಿ ಕಾಪಿನಡ್ಕ, ಗೆಜ್ಜೆಗಿರಿ ಮೇಳದ ಮ್ಯಾನೇಜರ್ ನಿತಿನ್ ತೆಂಕಕಾರಂದೂರು, ವಿದ್ಯಾನಂದ ಅಂಗಡಿಬೆಟ್ಟು,ರಮಾನಂದ ಬೆಂಗಳೂರು, ಬೇಬಿ ಪೂಜಾರಿ ಪುಣ್ಕೆತ್ಯಾರು,ಲೀಲಾ ಜಗದೀಶ್ ಹಾಗೂ ಇತರರು ಉಪಸ್ಥಿತರಿದ್ದರು.

ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.

Related posts

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ. ಪ್ರಾ.ಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ತ್ರೋಬಾಲ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ವಾಲಿಬಾಲ್ ಪಂದ್ಯಾಟ: ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳು ಹಾಗೂ ಪದ್ಮುಂಜ ಪ್ರೌಢಶಾಲಾ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡಿ ಎರಡು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!