September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

ಉಜಿರೆ: NABH ಪುರಸ್ಕೃತ ಉಜಿರೆಯ ಬೆನಕ  ಹೆಲ್ತ್ ಸೆಂಟರ್ ನಲ್ಲಿ  ಎ.19ರಂದು  ಆದಿತ್ಯವಾರ ಆಸ್ಪತ್ರೆಯ ಔಷಧಾಲಯವನ್ನು  ನೂತನವಾಗಿ ಸಜ್ಜುಗೊಂಡ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಸ್ಥಳಾಂತರಗೊಂಡ ಔಷಧಾಲಯ (ಫಾರ್ಮಸಿ)ಯನ್ನು ಹಿರಿಯ ಸೀತಾರಾಮ ಭಟ್ ಕೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ. ಕೆ ಮಾತನಾಡಿ ನಮ್ಮ ಆಸ್ಪತ್ರೆಯ ಔಷಧಾಲಯವನ್ನು ವಿನೂತನವಾಗಿ ನಿರ್ಮಿಸಿದ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಿ ದಿನದ 24 ಗಂಟೆಗಳ ಕಾಲ  (24×7) ಈ ಭಾಗದ ಸಾರ್ವಜನಿಕರಿಗೆ ಸೇವೆ ಸಲ್ಲಿಸಬೇಕೆಂಬ ನನ್ನ ಕನಸು ಈ ದಿನ ನನಸಾಗಿದೆ ಎಂದರೆ ಅತಿಶಯೋಕ್ತಿಯಲ್ಲ ಯಾಕೆಂದರೆ ಔಷಧಾಲಯವು  ಯಾವುದೇ ಆಸ್ಪತ್ರೆಯ ಜೀವನಾಡಿಯಾಗಿರುತ್ತದೆ. ರೋಗಿಗಳಿಗೆ ಕ್ಲಿಷ್ಟ ಸಮಯದಲ್ಲಿ ಔಷಧಿಗಳನ್ನು ವಿತರಿಸಲು ಈಗಿನ ವ್ಯವಸ್ಥೆ ತುಂಬ ಅನುಕೂಲವಾಗಿದೆ ಎಂದು ತಿಳಿಸಿದರು.

ಉದ್ಘಾಟಕರಾದ ಸೀತಾರಾಮ ಭಟ್ ಕೆ ಇವರು ಆಸ್ಪತ್ರೆಯ ಏಳಿಗೆಯಲ್ಲಿ ಇದೊಂದು ಮಹತ್ವದ ಹೆಜ್ಜೆ ಮತ್ತು ಇದರಿಂದ ಎಲ್ಲರಿಗೂ ಅನುಕೂಲವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಾ.ಭಾರತಿ ಜಿ.ಕೆ, ಡಾ. ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ನವ್ಯ ಭಟ್,   ಡಾ. ಶ್ರೀಹರ್ಷ ತುಲುಪುಲೆ, ಡಾ. ದೀಕ್ಷಿತ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ “ಸ್ವಾಸ್ಥ್ಯ ಸಂಕಲ್ಪ “ಕಾರ್ಯಕ್ರಮ

Suddi Udaya

ತಿಮರೋಡಿ ಗಡಿಪಾರು ಪ್ರಕರಣ; ಬಂಟ್ವಾಳ ಡಿ.ವೈ.ಎಸ್.ಪಿ‌ ವಿರುದ್ದ ಲೋಕಾಯುಕ್ತ, ಮಾನವ ಹಕ್ಕುಗಳ ಆಯೋಗ ಹಾಗೂ ಸರಕಾರಕ್ಕೆ ಜಯಂತ್ ಟಿ‌ ದೂರು

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ: ಎಸ್.ವೈ. ಎಸ್ ಕನ್ಯಾಡಿ ಯುನಿಟ್ ಕೋಶಾಧಿಕಾರಿ ಇದ್ರೀಸ್ ನಿಧನ

Suddi Udaya

ಬೆಳ್ತಂಗಡಿ: ಎಸ್.ಎನ್. ಕಂಪ್ಯೂಟರ್ಸ್ ಮತ್ತು ಸೈಬರ್ ಕೇಂದ್ರ ಸ್ಥಳಾಂತರಗೊಂಡು ಪುನರಾರಂಭ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!