24 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

ಉಜಿರೆ: NABH ಪುರಸ್ಕೃತ ಉಜಿರೆಯ ಬೆನಕ  ಹೆಲ್ತ್ ಸೆಂಟರ್ ನಲ್ಲಿ  ಎ.19ರಂದು  ಆದಿತ್ಯವಾರ ಆಸ್ಪತ್ರೆಯ ಔಷಧಾಲಯವನ್ನು  ನೂತನವಾಗಿ ಸಜ್ಜುಗೊಂಡ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಸ್ಥಳಾಂತರಗೊಂಡ ಔಷಧಾಲಯ (ಫಾರ್ಮಸಿ)ಯನ್ನು ಹಿರಿಯ ಸೀತಾರಾಮ ಭಟ್ ಕೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ. ಕೆ ಮಾತನಾಡಿ ನಮ್ಮ ಆಸ್ಪತ್ರೆಯ ಔಷಧಾಲಯವನ್ನು ವಿನೂತನವಾಗಿ ನಿರ್ಮಿಸಿದ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಿ ದಿನದ 24 ಗಂಟೆಗಳ ಕಾಲ  (24×7) ಈ ಭಾಗದ ಸಾರ್ವಜನಿಕರಿಗೆ ಸೇವೆ ಸಲ್ಲಿಸಬೇಕೆಂಬ ನನ್ನ ಕನಸು ಈ ದಿನ ನನಸಾಗಿದೆ ಎಂದರೆ ಅತಿಶಯೋಕ್ತಿಯಲ್ಲ ಯಾಕೆಂದರೆ ಔಷಧಾಲಯವು  ಯಾವುದೇ ಆಸ್ಪತ್ರೆಯ ಜೀವನಾಡಿಯಾಗಿರುತ್ತದೆ. ರೋಗಿಗಳಿಗೆ ಕ್ಲಿಷ್ಟ ಸಮಯದಲ್ಲಿ ಔಷಧಿಗಳನ್ನು ವಿತರಿಸಲು ಈಗಿನ ವ್ಯವಸ್ಥೆ ತುಂಬ ಅನುಕೂಲವಾಗಿದೆ ಎಂದು ತಿಳಿಸಿದರು.

ಉದ್ಘಾಟಕರಾದ ಸೀತಾರಾಮ ಭಟ್ ಕೆ ಇವರು ಆಸ್ಪತ್ರೆಯ ಏಳಿಗೆಯಲ್ಲಿ ಇದೊಂದು ಮಹತ್ವದ ಹೆಜ್ಜೆ ಮತ್ತು ಇದರಿಂದ ಎಲ್ಲರಿಗೂ ಅನುಕೂಲವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಾ.ಭಾರತಿ ಜಿ.ಕೆ, ಡಾ. ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ನವ್ಯ ಭಟ್,   ಡಾ. ಶ್ರೀಹರ್ಷ ತುಲುಪುಲೆ, ಡಾ. ದೀಕ್ಷಿತ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಎಲ್ .ಸಿ.ಆರ್ ವಿದ್ಯಾ ಸಂಸ್ಥೆ : ಶಾಲಾ ಸಂಸತ್ತು ಚುನಾವಣೆ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರಿಂದ ಮೊದಲ ದಿನವೇ 6 ಮೆಗಾ ಗ್ಯಾರಂಟಿ: ವಿದ್ಯಾರ್ಥಿಗಳಿಗೂ ಫ್ರೀ ಬಸ್ ಪಾಸ್- ಯುವ ಜನರಿಗೆ ಉದ್ಯೋಗ ಗ್ಯಾರಂಟಿ- ಜೋಡೋ ಯುವ ಸಂಘ ರಚನೆ

Suddi Udaya

ಜೂ.4: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಝೋನ್’ ವಾಚ್ ಶೋರೂಂ ಶುಭಾರಂಭ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya
error: Content is protected !!