September 6, 2026
ಚಿತ್ರ ವರದಿವರದಿಸಂಘ-ಸಂಸ್ಥೆಗಳು

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

ಮಂಗಳೂರು: ಉಳ್ಳಾಲದ ಅಬ್ಬಕ್ಕ ರಾಣಿ ಆಳ್ವಿಕೆಯ 500ನೇ ವರ್ಷಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಉಪನ್ಯಾಸಕರ ಹಾಗೂ ಶಿಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಬ್ಬಕ್ಕ ರಾಣಿಯ ಕುರಿತ 100 ಸರಣಿ ಉಪನ್ಯಾಸ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಹಾಗೂ ನಾಡಿನ ಹಲವು ಖ್ಯಾತ ಉಪನ್ಯಾಸಕರು, ಸಾಹಿತಿಗಳು,ಸಂಶೋಧಕರು ಅಬ್ಬಕ್ಕ ರಾಣಿಯ ಕುರಿತಾಗಿ ಸಂಶೋಧನೆ ನಡೆಸಿ ಸಿದ್ಧಪಡಿಸಿದ ಸಂಶೋಧನಾತ್ಮಕ ಪ್ರಬಂಧಗಳನ್ನೊಳಗೊಂಡ ವಿಶೇಷ ಬೃಹತ್ ಗ್ರಂಥ ಸಂಚಿಕೆಯ ಲೋಕಾರ್ಪಣಾ ಕಾರ್ಯಕ್ರಮವು ಮಂಗಳೂರಿನ ನಿರ್ಮಲ ಭಾರತ್ ಚಾರಿಟೇಬಲ್ ಟ್ರಸ್ಟ್ ಇದರ ಸಹಯೋಗದೊಂದಿಗೆ ಎ.18ರಂದು ಉಳ್ಳಾಲದ ಶಾರದಾ ನಿಕೇತನ ಸಭಾಂಗಣದಲ್ಲಿ ನಡೆಯಿತು.

ಕರ್ನಾಟಕ ರಾಜ್ಯ ಮಹಾವಿದ್ಯಾಲಯಗಳ ಉಪನ್ಯಾಸಕರ ಹಾಗೂ ಶಿಕ್ಷಕರ ಸಂಘ, ಮಂಗಳೂರು ವಿಭಾಗ ಆಯೋಜಿಸಿಕೊಂಡಿದ್ದ ಅಬ್ಬಕ್ಕ ರಾಣಿಯ ನೂರು ಉಪನ್ಯಾಸ ಸರಣಿ ಕಾರ್ಯಕ್ರಮಗಳಲ್ಲಿ ಉಪನ್ಯಾಸಕರು, ಸಾಹಿತಿ, ಸಂಶೋಧಕರು ಹಾಗೂ ಚಲನಚಿತ್ರ ನಿರ್ದೇಶಕರೂ ಆಗಿರುವ ಬಿ.ಎ.ಲೋಕಯ್ಯ ಶಿಶಿಲರು ವಿಶೇಷ ಸಂಪನ್ಮೂಲ ವ್ಯಕ್ತಿಗಳಾಗಿ ಸರಣಿ ಉಪನ್ಯಾಸವನ್ನು ನಡೆಸಿಕೊಟ್ಟಿದರಲ್ಲದೆ ಅಬ್ಬಕ್ಕ ರಾಣಿಯ ಕುರಿತಾಗಿ ವಿಶೇಷ ಸಂಶೋಧನೆ ನಡೆಸಿ ಅಬ್ಬಕ್ಕ ರಾಣಿಯ ಕುರಿತಾಗಿ ಈ ವರೆಗೆ ಯಾರೂ ಕಂಡು ಕೇಳರಿಯದ ಬಹಳಷ್ಟು ವಿಚಾರಗಳನ್ನು ತಮ್ಮ ಸಂಶೋಧನಾ ಪ್ರಬಂಧದಲ್ಲಿ ತಿಳಿಯಪಡಿಸಿದ್ದಾರೆ. ಇದರಂತೆ ನಾಡಿನ ಹಲವು ವಿದ್ವಾಂಸರು ಸಂಶೋಧಿಸಿದ ಸಂಶೋಧನಾ ಪ್ರಬಂಧಗಳು ಕೂಡ ಈ ಗ್ರಂಥ ಸಂಚಿಕೆಯಲ್ಲಿ ಪ್ರಕಟವಾಗಿರುತ್ತವೆ.

ಸಮಾರಂಭದ ದೀಪ ಪ್ರಜ್ವಲನೆಯನ್ನು ಅಬ್ಬಕ್ಕ ರಾಣಿಯ ವಂಶಸ್ಥರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಅನಿತಾ ಸುರೇಂದ್ರ ಕುಮಾರ್ ನೆರವೇರಿಸಿದರು.

ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೇಣೂರು ಬಾಹುಬಲಿ ಮಸ್ತಕಾಭಿಷೇಕ ಸಮಿತಿಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ, ರಾಷ್ಟ್ರೀಯ ಸ್ವಯಂಸೇವಕ ಸಂಘ ದಕ್ಷಿಣ ಪ್ರಾಂತ ಇದರ ಪ್ರಾಂತ ಸಹ ಕಾರ್ಯವಾಹಕರಾದ ಪಿ.ಎಸ್. ಪ್ರಕಾಶ್, ರಾಜ್ಯ ಕೆ.ಆರ್.ಎಂ ಎಸ್ ನ ರಾಜ್ಯಾಧ್ಯಕ್ಷ ಗುರುನಾಥ್ ಬಡಿಗೇರ್, ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷ ಸಂದೀಪ್ ಬೂದಿಹಾಳ್, ನಿರ್ಮಲ್ ಭಾರತ್ ಚಾರಿಟೇಬಲ್ ಟ್ರಸ್ಟ್ ಇದರ ವಿಶ್ವಸ್ಥ ಕೆ. ರಮೇಶ್ ಮುಂತಾದವರು ಉಪಸ್ಥಿತರಿದ್ದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಸಹ ಬೌದ್ಧಿಕ್ ಪ್ರಮುಖರಾದ ಸುಧೀರ್ ಸಮಾರೋಪ ಭಾಷಣ ನೆರವೇರಿಸಿದರು. ಇದೇ ವೇಳೆ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಇದರ ಸಂಸ್ಥಾಪಕ ತುಕಾರಾಂ ಪೂಜಾರಿ ಹಾಗೂ ಡಾ ಆಶಾಲತಾ ಸುವರ್ಣ ಇವರನ್ನು ಸನ್ಮಾನಿಸಲಾಯಿತು.

Related posts

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya

ಆಪರೇಷನ್ ಸಿಂದೂರ ಯಶಸ್ವಿ ಕಾರ್ಯಚರಣೆ : ಬಿಜೆಪಿ ಗರ್ಡಾಡಿ ಶಕ್ತಿ ಕೇಂದ್ರ ವತಿಯಿಂದ ದೇವರಿಗೆ ವಿಶೇಷ ಪೂಜೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ವನದುರ್ಗಾ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ವ್ರತಾಚರಣೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಕಾರ್ಯದರ್ಶಿಯಾಗಿ ಅರುಣ ದೇವಾಡಿಗ ಆಯ್ಕೆ

Suddi Udaya

ಡಾ. ರೋಹನ್ ದೀಕ್ಷಿತ್ ರೋಟರೀ ಕ್ಲಬ್ ಸದಸ್ಯರಾಗಿ ಪದಗ್ರಹಣ

Suddi Udaya

ಅಪ್ಸರಾ ಫ್ಯಾಶನ್ ಸೆಂಟರ್ ನಲ್ಲಿ ಆಷಾಡ ಹಾಗೂ ಮಾನ್ಸೂನ್ ಆಫರ್ ಡಿಸ್ಕೌಂಟ್ ಸೇಲ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya
error: Content is protected !!