22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆನಕ  ಹೆಲ್ತ್ ಸೆಂಟರ್ ನ ಔಷಧಾಲಯ ಸ್ಥಳಾಂತರಗೊಂಡು ಉದ್ಘಾಟನೆ

ಉಜಿರೆ: NABH ಪುರಸ್ಕೃತ ಉಜಿರೆಯ ಬೆನಕ  ಹೆಲ್ತ್ ಸೆಂಟರ್ ನಲ್ಲಿ  ಎ.19ರಂದು  ಆದಿತ್ಯವಾರ ಆಸ್ಪತ್ರೆಯ ಔಷಧಾಲಯವನ್ನು  ನೂತನವಾಗಿ ಸಜ್ಜುಗೊಂಡ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.

ಸ್ಥಳಾಂತರಗೊಂಡ ಔಷಧಾಲಯ (ಫಾರ್ಮಸಿ)ಯನ್ನು ಹಿರಿಯ ಸೀತಾರಾಮ ಭಟ್ ಕೆ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಗೋಪಾಲಕೃಷ್ಣ. ಕೆ ಮಾತನಾಡಿ ನಮ್ಮ ಆಸ್ಪತ್ರೆಯ ಔಷಧಾಲಯವನ್ನು ವಿನೂತನವಾಗಿ ನಿರ್ಮಿಸಿದ ಮತ್ತು ವಿಶಾಲ ಸ್ಥಳಕ್ಕೆ ಸ್ಥಳಾಂತರಿಸಿ ದಿನದ 24 ಗಂಟೆಗಳ ಕಾಲ  (24×7) ಈ ಭಾಗದ ಸಾರ್ವಜನಿಕರಿಗೆ ಸೇವೆ ಸಲ್ಲಿಸಬೇಕೆಂಬ ನನ್ನ ಕನಸು ಈ ದಿನ ನನಸಾಗಿದೆ ಎಂದರೆ ಅತಿಶಯೋಕ್ತಿಯಲ್ಲ ಯಾಕೆಂದರೆ ಔಷಧಾಲಯವು  ಯಾವುದೇ ಆಸ್ಪತ್ರೆಯ ಜೀವನಾಡಿಯಾಗಿರುತ್ತದೆ. ರೋಗಿಗಳಿಗೆ ಕ್ಲಿಷ್ಟ ಸಮಯದಲ್ಲಿ ಔಷಧಿಗಳನ್ನು ವಿತರಿಸಲು ಈಗಿನ ವ್ಯವಸ್ಥೆ ತುಂಬ ಅನುಕೂಲವಾಗಿದೆ ಎಂದು ತಿಳಿಸಿದರು.

ಉದ್ಘಾಟಕರಾದ ಸೀತಾರಾಮ ಭಟ್ ಕೆ ಇವರು ಆಸ್ಪತ್ರೆಯ ಏಳಿಗೆಯಲ್ಲಿ ಇದೊಂದು ಮಹತ್ವದ ಹೆಜ್ಜೆ ಮತ್ತು ಇದರಿಂದ ಎಲ್ಲರಿಗೂ ಅನುಕೂಲವಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಡಾ.ಭಾರತಿ ಜಿ.ಕೆ, ಡಾ. ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ನವ್ಯ ಭಟ್,   ಡಾ. ಶ್ರೀಹರ್ಷ ತುಲುಪುಲೆ, ಡಾ. ದೀಕ್ಷಿತ್ ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನಡ: ಜಮಲಾಬಾದ್ ಇದ್ಗ ಮೈದಾನ ನಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಕುಣಿತ ಭಜನೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕಾಗಿ ಆಗ್ರಹಿಸಿ ಭಜಕರ ಬೃಹತ್ ಸಮಾವೇಶ: ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ದೇವಸ್ಥಾನದ ಬಳಿಯಿಂದ ಖಂಡನಾ ಮೆರವಣಿಗೆ

Suddi Udaya

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಶಿಬಾಜೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಧರ್ಮ ಸಂರಕ್ಷಣಾ ಯಾತ್ರೆ

Suddi Udaya
error: Content is protected !!