September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಪಾಧ್ಯಕ್ಷರಾಗಿ ಕೆ‌ ಧರಣೇಂದ್ರ ಜೈನ್ ಆಯ್ಕೆ

ಬೆಳ್ತಂಗಡಿ: ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಉಡುಪಿ ಇದು 112 ವರ್ಷಗಳ ಇತಿಹಾಸವುಳ್ಳ ಪ್ರತಿಷ್ಠಿತ ಬ್ಯಾಂಕ್ ಆಗಿದ್ದು ಇದರ ಉಪಾಧ್ಯಕ್ಷರಾಗಿ ಕೆ ಧರಣೇಂದ್ರ ಜೈನ್ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈಗಾಗಲೇ ರಾಜ್ಯದ 18 ಜಿಲ್ಲೆಗಳಲ್ಲಿ ಪ್ರಸ್ತುತ 16 ಶಾಖೆಗಳನ್ನು, 25000 ಕ್ಕಿಂತಲೂ ಹೆಚ್ಚು ಸದಸ್ಯರನ್ನು ಹೊಂದಿರುವ ಪ್ರತಿಷ್ಠಿತ ಬ್ಯಾಂಕ್, ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ಪ್ರಶಸ್ತಿಗಳನ್ನು ಪಡೆದಿರುವ ಬ್ಯಾಂಕ್ ಆಗಿರುತ್ತದೆ.

ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದ ಸಮಾಜ ವಿಜ್ಞಾನ ಶಿಕ್ಷಕರಾದ ಧರಣೇಂದ್ರ ಕೆ ಇವರು
ಅತ್ಯುತ್ತಮ ಕಾರ್ಯಕ್ರಮ ನಿರೂಪಕನಾಗಿ, ಅಸಾಮಾನ್ಯ ಸಂಘಟನಾಗಿ, ಜಿಲ್ಲೆ ಹಾಗೂ ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಗುರುತಿಸಿಕೊಂಡವರು.

ಸಾಮಾಜಿಕ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ಸೈ ಎನಿಸಿಕೊಂಡವರು. ಮಡಂತ್ಯಾರು ಜೆಸಿಐನ ಅಧ್ಯಕ್ಷರಾಗಿ, ಅಂತರಾಷ್ಟ್ರೀಯ ಲಯನ್ ಸೇವಾ ಸಂಸ್ಥೆಯ ಬೆಳ್ತಂಗಡಿಯ ಅಧ್ಯಕ್ಷರಾಗಿ, ವಲಯಾಧ್ಯಕ್ಷ, ಪ್ರಾಂತ್ಯಾಧ್ಯಕ್ಷ, ಲಯನ್ಸ್ ಜಿಲ್ಲಾ ಸಂಪುಟದಲ್ಲಿ ವಿವಿಧ ಹುದ್ದೆಗಳಲ್ಲಿ ತೊಡಗಿಸಿಕೊಂಡು ಸಾಧಕರಾದವರು. ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಡಂತ್ಯಾರ್ ಸಂಸ್ಥೆಯ ಜೊತೆ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಸರಕಾರಿ ನೌಕರ ಸಂಘದ ಪದಾಧಿಕಾರಿಯಾಗಿ, ರಾಜ್ಯ ಪರಿಷತ್ತು ಸದಸ್ಯರಾಗಿ, ಬೆಳ್ತಂಗಡಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ಹೀಗೆ ಹಲವಾರು ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಆ ಹುದ್ದೆಗೆ ನ್ಯಾಯವನ್ನು ಒದಗಿಸಿಕೊಟ್ಟು ಎಲ್ಲರ ಮೆಚ್ಚುಗೆಗೆ ಪಾತ್ರರಾದವರು.

Related posts

ವೇಣೂರು ಕಾರು ಚಾಲಕ ಬೈರಣ್ಣ ನಿಧನ

Suddi Udaya

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರ್ಜುನ್ ಜನ್ಯ ದಂಪತಿ ಭೇಟಿ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya
error: Content is protected !!