September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಯುವವಾಹಿನಿಯ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ.

ಬೆಳ್ತಂಗಡಿ : ಯುವವಾಹಿನಿ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆಯು ಎ.16ರಂದು ಬೆಳ್ತಂಗಡಿಯ ಗುರುನಾರಾಯಣ ಸಭಾಭವನದಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ವಹಿಸಿದ್ದರು. ಘಟಕದ ಪ್ರಧಾನ ಕಾರ್ಯದರ್ಶಿ ಮಧುರ ರಾಘವ್ ವಾರ್ಷಿಕ ವರದಿಯನ್ನು ಮಂಡಿಸಿದರು. ಕೋಶಾಧಿಕಾರಿ ನಾಗೇಶ್ ಅದೇಲು ಇವರು ವಾರ್ಷಿಕ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಘಟಕದ ನಿಕಟಪೂರ್ವ ಅಧ್ಯಕ್ಷರು ಚುನಾವಣಾಧಿಕಾರಿ ಸದಾಶಿವ ಪೂಜಾರಿ ಊರ 2026-27ನೇ ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ನೂತನ ಅಧ್ಯಕ್ಷರಾಗಿ ಲೀಲಾವತಿ ಪಣಕಜೆ, ಉಪಾಧ್ಯಕ್ಷರಾಗಿ ಸುನಿಲ್ ಕನ್ಯಾಡಿ, ನಾಗೇಶ್ ಅದೇಲು, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನ್ ಕುಮಾರ್ ಬಿ.ಕೆ., ಜೊತೆ ಕಾರ್ಯದರ್ಶಿಯಾಗಿ ಆಕಾಶ್ ಗೇರುಕಟ್ಟೆ, ಕೋಶಾಧಿಕಾರಿಯಾಗಿ ಸುದೀಪ್ ಸಾಲಿಯಾನ್ ಸವಣಾಲು ಆಯ್ಕೆಯಾದರು. ಘಟಕದ ವಿವಿಧ ಸಮಿತಿಗಳಿಗೆ ನಿರ್ದೇಶಕರುಗಳನ್ನು ಹಾಗೂ ಸಂಘಟನಾ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳಾದ ಎಂ.ಕೆ ಪ್ರಸಾದ್, ಸುಜಾತ ಅಣ್ಣಿ ಪೂಜಾರಿ, ಅಶ್ವಥ್ ಕುಮಾರ್ ಹಾಗೂ ಘಟಕದ ಪದಾಧಿಕಾರಿಗಳು ಸಲಹೆಗಾರರು ಉಪಸ್ಥಿತರಿದ್ದರು.

Related posts

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya

ತಲೆಮರೆಸಿಕೊಂಡಿರುವ ವಿಠಲ್ ಗೌಡರ ಬಂಧನಕ್ಕಾಗಿ ಪೊಲೀಸರಿಂದ ಹುಡುಕಾಟ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya
error: Content is protected !!