26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

ನೆಲ್ಯಾಡಿ: ನೆಲ್ಯಾಡಿಯ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರವಾದ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗಾಗಿ ಮೂರು ದಿನಗಳ ಬೇಸಿಗೆ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಬೆಳ್ತಂಗಡಿ ಧರ್ಮಪ್ರಾಂತ್ಯದ ಮೇಜರ್ ಸೆಮಿನಾರಿಯನ್ಸ್ ಈ ಶಿಬಿರಕ್ಕೆ ನೇತೃತ್ವ ನೀಡಿದರು.

ಶಿಬಿರದ ಅವಧಿಯಲ್ಲಿ ಮಕ್ಕಳಿಗೆ ವೈವಿಧ್ಯಮಯ ಚಟುವಟಿಕೆಗಳ ಮೂಲಕ ಸಾಮಾಜಿಕ ಬದ್ಧತೆ, ಆಧ್ಯಾತ್ಮಿಕ ಚಿಂತನೆ, ವ್ಯಕ್ತಿತ್ವ ವಿಕಾಸ ಮತ್ತು ಉತ್ತಮ ಹವ್ಯಾಸಗಳ ರೂಢಿ ಕುರಿತು ಸಮಗ್ರ ತರಬೇತಿ ನೀಡಲಾಯಿತು. ಪ್ರಾರ್ಥನೆ, ಗುಂಪು ಚರ್ಚೆ, ಕ್ರೀಡೆ, ಸಂಗೀತ, ನೃತ್ಯ ಮತ್ತು ಮೌಲ್ಯಾಧಾರಿತ ತರಗತಿಗಳು ಮಕ್ಕಳನ್ನು ಆಕರ್ಷಿಸಿದವು.

ಕಾರ್ಯಕ್ರಮವನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದ ಮೈನರ್ ಸೆಮಿನಾರಿ ರೆಕ್ಟರ್ ಫಾ. ರೋಬಿನ್ ಕೇಳಪರಂಭಿಲ್ ಉದ್ಘಾಟಿಸಿದರು. ಫಾ. ಜಿನ್ಸ್ ಕೋಲಕುನ್ನೆಲ್, ಫಾ. ಜಿನ್ಸ್ ವಲಿಯಪರಂಭಿಲ್, ಆಪ್ತ ಸಮಾಲೋಚನೆಗಾರ್ತಿ ಸಿಸ್ಟರ್ ಆಲ್ಫಿ ಎಸ್.ಎಚ್., ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ರೊಯ್ ಕೊಳೋಗರಾತ್, ಸಿ.ಎಂ.ಎಲ್. ಮುಖ್ಯಸ್ಥ ಶ್ರೀ ಅಲೆನ್ ನೀರಪ್ಪೆಲ್ ಹಾಗೂ ಬ್ರದರ್ ಬಿನೋಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುಣ್ಯ ಕ್ಷೇತ್ರದ ವಂದನೀಯ ಫಾ. ಶಾಜಿ ಮಾತ್ಯು ಪ್ರಾಸ್ತಾವಿಕವಾಗಿ ಮಾತನಾಡಿ, “ರಜೆಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಮತ್ತು ವ್ಯಕ್ತಿತ್ವದ ವೈವಿಧ್ಯತೆಯನ್ನು ಅರಿಯುವ ಸುವರ್ಣಾವಕಾಶವಾಗಬೇಕು” ಎಂದು ಹೇಳಿದರು.
ಶಿಬಿರವು ಮಕ್ಕಳಲ್ಲಿ ಹೊಸ ಚೈತನ್ಯ ಮೂಡಿಸಿ, ನೈತಿಕ ಮೌಲ್ಯಗಳೊಂದಿಗೆ ಜೀವನವನ್ನು ರೂಪಿಸಿಕೊಳ್ಳಲು ಪ್ರೇರಣೆ ನೀಡಿದಂತಾಯಿತು. ಪೋಷಕರು ಹಾಗೂ ಸ್ಥಳೀಯರು ಈ ಕಾರ್ಯಕ್ರಮವನ್ನು ಪ್ರಶಂಸಿಸಿದರು.

Related posts

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳನ್ನು ಪಿಕಪ್-ಟಿಪ್ಪರ್ ನಲ್ಲಿ ವಿಹಾರಕ್ಕೆ ಕರೆದೊಯ್ದ ಶಿಕ್ಷಕ: ಸುರಕ್ಷಿತ ಕ್ರಮಗಳನ್ನು ಅನುಸರಿಸದೆ ಕರೆದೊಯ್ದ ಶಿಕ್ಷಕನ ವಿರುದ್ಧ ಪೋಷಕರ ಅಸಮಾಧಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಲಾಯಿಲ ಕರ್ನೋಡಿ ಸ.ಹಿ.ಪ್ರಾ. ಶಾಲೆಯ ನವೀಕರಿಸಿದ ಶಾಲಾ ಕಟ್ಟಡ ಹಸ್ತಾಂತರ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ವಾಣಿ ಆಂಗ್ಲ ಮಾಧ್ಯಮ ಶಾಲೆ ಕಿರಿಯ-ಹಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya
error: Content is protected !!