August 2, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಂಸದ ಕ್ಯಾ. ಚೌಟ ಅವರನ್ನು ಭೇಟಿ ಮಾಡಿದ ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ

ಮಂಗಳೂರು : ಅಡ್ವೆಂಚರ್ ವಾಟರ್ ಸ್ಪೋರ್ಟ್ಸ್ , ಪ್ರವಾಸೋದ್ಯಮ ಸಹಿತ ದಕ್ಷಿಣ ಕನ್ನಡದ ಅಭಿವೃದ್ಧಿಗೆ ಪೂರಕವಾದ ವಿವಿಧ ವಿಚಾರವಾಗಿ ಆಸ್ಟ್ರೇಲಿಯಾದ ಕಾನ್ಸುಲ್ ಜನರಲ್ ಹಿಲರಿ ಮೆಕ್‌ಗೀಚಿ ಅವರನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನಲ್ಲಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಸೋಮವಾರದಂದು ಮಂಗಳೂರಿಗೆ ಭೇಟಿ ನೀಡಿದ ಕಾನ್ಸುಲ್ ಜನರಲ್ ಅವರೊಂದಿಗೆ ನಡೆಸಿದ ಚರ್ಚೆಯ ಸಂದರ್ಭದಲ್ಲಿ, ಆಸ್ಟ್ರೇಲಿಯಾ ಹಾಗೂ ದಕ್ಷಿಣ ಕನ್ನಡ ಎರಡೂ ಕಡೆ ವಿಸ್ತಾರವಾದ ಕರಾವಳಿ ಪ್ರದೇಶ ಹೊಂದಿರುವುದರಿಂದ, ಸಾಹಸಮಯ ವಾಟರ್‌ ಸ್ಪೋರ್ಟ್ಸ್‌ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಕುರಿತು ಸಮಾಲೋಚಿಸಲಾಯಿತು. ಪ್ರಮುಖವಾಗಿ, ಆಸ್ಟ್ರೇಲಿಯಾದ ತಾಂತ್ರಿಕ ನೈಪುಣ್ಯತೆ ಮತ್ತು ಈ ಕ್ಷೇತ್ರದಲ್ಲಿ ಅವರಿಗಿರುವ ದಶಕಗಳ ಅನುಭವವನ್ನು ನಮ್ಮ ಕರಾವಳಿಯ ಅಭಿವೃದ್ಧಿಗೆ ಪೂರಕವಾಗಿ ಹೇಗೆ ಬಳಸಿಕೊಳ್ಳಬಹುದು ಎಂಬ ಬಗ್ಗೆ ಪರಸ್ಪರ ಚರ್ಚಿಸಲಾಯಿತು.

ಕ್ರೀಡಾ ಕ್ಷೇತ್ರದಲ್ಲಿ ಯುವಜನತೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ, ಆಸ್ಟ್ರೇಲಿಯಾದ ವಿಶ್ವವಿದ್ಯಾಲಯಗಳೊಂದಿಗೆ ಕ್ರೀಡಾ ಪಠ್ಯಕ್ರಮ ಅಭಿವೃದ್ಧಿಗಾಗಿ ಸಹಭಾಗಿತ್ವ ಹೊಂದುವ ಕುರಿತು ಕೂಡ ಇದೇವೇಳೆ ಚರ್ಚಿಸಲಾಯಿತು.

ಈ ಸೌಹಾರ್ದಯುತ ಭೇಟಿಯ ಸಂದರ್ಭದಲ್ಲಿ ಕಾನ್ಸಲ್ ಜನರಲ್ ಅವರು ಸಂಸದ ಕ್ಯಾ. ಚೌಟ ಅವರಿಗೆ ಸ್ಮರಣಿಕೆಯಾಗಿ ಲೆದರ್ ಬಾಲ್ ಅನ್ನು ಉಡುಗೊರೆಯಾಗಿ ನೀಡಿದ್ದು ವಿಶೇಷವಾಗಿತ್ತು.

ಭೇಟಿ ಬಳಿಕ ಪ್ರತಿಕ್ರಿಯಿಸಿದ ಕ್ಯಾ. ಚೌಟ ಅವರು ಇಂತಹ ಉಪಕ್ರಮಗಳು ಎರಡು ದೇಶಗಳ ನಡುವಿನ ಸಂಬಂಧ ಗಟ್ಟಿಗೊಳಿಸುವುದಲ್ಲದೆ ನಮ್ಮ ಯುವಜನತೆಗೆ ಜಾಗತಿಕ ಮಟ್ಟದ ಕೌಶಲ್ಯ ಮತ್ತು ಮಾನ್ಯತೆಯನ್ನು ಒದಗಿಸುವ ಮೂಲಕ ಹೊಸ ಹಾದಿ ತೆರೆಯಲಿವೆ. ಅಲ್ಲದೆ ಇದು ಆರ್ಥಿಕ ಪ್ರಗತಿಯ ಜೊತೆಗೆ ‘ವಿಕಸಿತ ಭಾರತ’ದ ದೃಷ್ಟಿಕೋನಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದು ಆಶಯ ವ್ಯಕ್ತಪಡಿಸಿದರು.

Related posts

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ; ಮೊದಲ ಸ್ಥಳದಲ್ಲಿ ಸಿಗದ ಅವಶೇಷಗಳು; ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ -ಅನುಚೇತ್ ಹೇಳಿಕೆ

Suddi Udaya

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ’ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!