September 18, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

ಬೆಳ್ತಂಗಡಿ: ಕನ್ಯಾಡಿ | ಗ್ರಾಮದ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಎದುರಿನ ಬೀಗವನ್ನು ಮುರಿದು ಕಳ್ಳರು ದೇವರ ನಾಲ್ಕು ಕಾಣಿಕೆ ಡಬ್ಬಿಗಳನ್ನು ಕಳವುಗೈದ ಘಟನೆ ಎ.೨೨ರಂದು ವರದಿಯಾಗಿದೆ.

ಎ.21ರಂದು ರಾತ್ರಿ ಸುಮಾರು ೨ ಗಂಟೆಯ ವೇಳೆಗೆ ದೇವಸ್ಥಾನದ ಎದುರಿನ ಬಾಗಿಲ ಬೀಗವನ್ನು ಯಾವುದೇ ಆಯುಧರಿಂದ ಮೀಟಿ ಮುರಿದು ಒಳನುಗ್ಗಿದ ಕಳ್ಳರು ದೇವಸ್ಥಾನದ ಒಳಗೆ ಇದ್ದ ಒಂದು ದೊಡ್ಡ ಕಾಣಿಕೆ ಡಬ್ಬಿ ಹಾಗೂ ಮೂರು ಸಣ್ಣ ಕಾಣಿಕೆ ಡಬ್ಬಿಯನ್ನು ಕಳವುಗೈದು ಪರಾರಿಯಾಗಿದ್ದಾರೆ. ಕಳ್ಳರು ದೇವಸ್ಥಾನ ಬೀಗ ಮುರಿದು ಒಳನುಗ್ಗಿ ಕಾಣಿಕೆ ಡಬ್ಬಿ ಕಳವು ಗೈದಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವಾದ ನಾಲ್ಕು ಕಾಣಿಕೆ ಡಬ್ಬಿಯಲ್ಲಿ ಭಕ್ತರು ಕಾಣಿಕೆ ಹಾಕಿದ ರೂ.೩೦ ಸಾವಿರದಷ್ಟು ಹಣ ಇತ್ತೆಂದು ಅಂದಾಜಿಸಲಾಗಿದೆ. ನಿಡಿಗಲ್ ಶ್ರೀ ಲೋಕನಥೇಶ್ವರ ದೇವಸ್ಥಾನದ ಸಿರಿ ಜಾತ್ರೋತ್ಸವ ಇತ್ತಿಚೇಗೆ ಆದ್ದೂರಿಯಾಗಿ ಜರುಗಿತ್ತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸಮಿತಿ ಸದಸ್ಯರು, ಊರವರು ದೇವಸ್ಥಾನಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Related posts

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಸುಲ್ಕೇರಿಮೊಗ್ರು ಪ್ರಾ.ಕೃ.ಪ.ಸ. ಸಂಘ ಶಿರ್ಲಾಲು ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಭಾರಿ ಮಳೆ ನಾಳೆ (ಜೂ.27) ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಭಾರತೀಯ ಲೆಕ್ಕ ಪರಿಶೋಧಕರ ಸಂಘದಿಂದ ಸಿಎ ಸಾಧಕಿ ನಿರೀಕ್ಷಾ ಎನ್.ನಾವರರಿಗೆ ಗೌರವಾರ್ಪಣೆ

Suddi Udaya
error: Content is protected !!