29.8 C
ಪುತ್ತೂರು, ಬೆಳ್ತಂಗಡಿ
June 19, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

ಬೆಳ್ತಂಗಡಿ: ಕನ್ಯಾಡಿ | ಗ್ರಾಮದ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಎದುರಿನ ಬೀಗವನ್ನು ಮುರಿದು ಕಳ್ಳರು ದೇವರ ನಾಲ್ಕು ಕಾಣಿಕೆ ಡಬ್ಬಿಗಳನ್ನು ಕಳವುಗೈದ ಘಟನೆ ಎ.೨೨ರಂದು ವರದಿಯಾಗಿದೆ.

ಎ.21ರಂದು ರಾತ್ರಿ ಸುಮಾರು ೨ ಗಂಟೆಯ ವೇಳೆಗೆ ದೇವಸ್ಥಾನದ ಎದುರಿನ ಬಾಗಿಲ ಬೀಗವನ್ನು ಯಾವುದೇ ಆಯುಧರಿಂದ ಮೀಟಿ ಮುರಿದು ಒಳನುಗ್ಗಿದ ಕಳ್ಳರು ದೇವಸ್ಥಾನದ ಒಳಗೆ ಇದ್ದ ಒಂದು ದೊಡ್ಡ ಕಾಣಿಕೆ ಡಬ್ಬಿ ಹಾಗೂ ಮೂರು ಸಣ್ಣ ಕಾಣಿಕೆ ಡಬ್ಬಿಯನ್ನು ಕಳವುಗೈದು ಪರಾರಿಯಾಗಿದ್ದಾರೆ. ಕಳ್ಳರು ದೇವಸ್ಥಾನ ಬೀಗ ಮುರಿದು ಒಳನುಗ್ಗಿ ಕಾಣಿಕೆ ಡಬ್ಬಿ ಕಳವು ಗೈದಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವಾದ ನಾಲ್ಕು ಕಾಣಿಕೆ ಡಬ್ಬಿಯಲ್ಲಿ ಭಕ್ತರು ಕಾಣಿಕೆ ಹಾಕಿದ ರೂ.೩೦ ಸಾವಿರದಷ್ಟು ಹಣ ಇತ್ತೆಂದು ಅಂದಾಜಿಸಲಾಗಿದೆ. ನಿಡಿಗಲ್ ಶ್ರೀ ಲೋಕನಥೇಶ್ವರ ದೇವಸ್ಥಾನದ ಸಿರಿ ಜಾತ್ರೋತ್ಸವ ಇತ್ತಿಚೇಗೆ ಆದ್ದೂರಿಯಾಗಿ ಜರುಗಿತ್ತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸಮಿತಿ ಸದಸ್ಯರು, ಊರವರು ದೇವಸ್ಥಾನಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Related posts

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಕೇಂದ್ರ ಮಸೀದಿ ಖತೀಬ್ ಜನಾಬ್ ಅಶ್ರಫ್ ಫೈಝಿ ಅರ್ಕಾನರವರಿಗೆ ಪವಿತ್ರ ಉಮ್ರಾ ಯಾತ್ರೆಗೆ ಬೀಳ್ಕೊಡುಗೆ

Suddi Udaya

ಮಲವಂತಿಗೆ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ಬೈಕ್ ಮತ್ತು ಕಾರು ಡಿಕ್ಕಿ : ಬೈಕ್ ಸವಾರನಿಗೆ ಗಾಯ

Suddi Udaya

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಧಾರವಾಡ ಎಸ್.ಡಿ.ಎಂ ಯೂನಿರ್ವಸಿಟಿ ರಿಜಿಸ್ಟ್ರಾರ್ ಭೇಟಿ

Suddi Udaya
error: Content is protected !!