August 3, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

ಬೆಳ್ತಂಗಡಿ: ಕನ್ಯಾಡಿ | ಗ್ರಾಮದ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಎದುರಿನ ಬೀಗವನ್ನು ಮುರಿದು ಕಳ್ಳರು ದೇವರ ನಾಲ್ಕು ಕಾಣಿಕೆ ಡಬ್ಬಿಗಳನ್ನು ಕಳವುಗೈದ ಘಟನೆ ಎ.೨೨ರಂದು ವರದಿಯಾಗಿದೆ.

ಎ.21ರಂದು ರಾತ್ರಿ ಸುಮಾರು ೨ ಗಂಟೆಯ ವೇಳೆಗೆ ದೇವಸ್ಥಾನದ ಎದುರಿನ ಬಾಗಿಲ ಬೀಗವನ್ನು ಯಾವುದೇ ಆಯುಧರಿಂದ ಮೀಟಿ ಮುರಿದು ಒಳನುಗ್ಗಿದ ಕಳ್ಳರು ದೇವಸ್ಥಾನದ ಒಳಗೆ ಇದ್ದ ಒಂದು ದೊಡ್ಡ ಕಾಣಿಕೆ ಡಬ್ಬಿ ಹಾಗೂ ಮೂರು ಸಣ್ಣ ಕಾಣಿಕೆ ಡಬ್ಬಿಯನ್ನು ಕಳವುಗೈದು ಪರಾರಿಯಾಗಿದ್ದಾರೆ. ಕಳ್ಳರು ದೇವಸ್ಥಾನ ಬೀಗ ಮುರಿದು ಒಳನುಗ್ಗಿ ಕಾಣಿಕೆ ಡಬ್ಬಿ ಕಳವು ಗೈದಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವಾದ ನಾಲ್ಕು ಕಾಣಿಕೆ ಡಬ್ಬಿಯಲ್ಲಿ ಭಕ್ತರು ಕಾಣಿಕೆ ಹಾಕಿದ ರೂ.೩೦ ಸಾವಿರದಷ್ಟು ಹಣ ಇತ್ತೆಂದು ಅಂದಾಜಿಸಲಾಗಿದೆ. ನಿಡಿಗಲ್ ಶ್ರೀ ಲೋಕನಥೇಶ್ವರ ದೇವಸ್ಥಾನದ ಸಿರಿ ಜಾತ್ರೋತ್ಸವ ಇತ್ತಿಚೇಗೆ ಆದ್ದೂರಿಯಾಗಿ ಜರುಗಿತ್ತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸಮಿತಿ ಸದಸ್ಯರು, ಊರವರು ದೇವಸ್ಥಾನಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Related posts

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ಪಾತಾಳ ವೆಂಕಟರಮಣ ಭಟ್ ಹೃದಯಾಘಾತದಿಂದ ನಿಧನ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya
error: Content is protected !!