40.8 C
ಪುತ್ತೂರು, ಬೆಳ್ತಂಗಡಿ
April 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

ಬೆಳ್ತಂಗಡಿ: ಕನ್ಯಾಡಿ | ಗ್ರಾಮದ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಎದುರಿನ ಬೀಗವನ್ನು ಮುರಿದು ಕಳ್ಳರು ದೇವರ ನಾಲ್ಕು ಕಾಣಿಕೆ ಡಬ್ಬಿಗಳನ್ನು ಕಳವುಗೈದ ಘಟನೆ ಎ.೨೨ರಂದು ವರದಿಯಾಗಿದೆ.

ಎ.21ರಂದು ರಾತ್ರಿ ಸುಮಾರು ೨ ಗಂಟೆಯ ವೇಳೆಗೆ ದೇವಸ್ಥಾನದ ಎದುರಿನ ಬಾಗಿಲ ಬೀಗವನ್ನು ಯಾವುದೇ ಆಯುಧರಿಂದ ಮೀಟಿ ಮುರಿದು ಒಳನುಗ್ಗಿದ ಕಳ್ಳರು ದೇವಸ್ಥಾನದ ಒಳಗೆ ಇದ್ದ ಒಂದು ದೊಡ್ಡ ಕಾಣಿಕೆ ಡಬ್ಬಿ ಹಾಗೂ ಮೂರು ಸಣ್ಣ ಕಾಣಿಕೆ ಡಬ್ಬಿಯನ್ನು ಕಳವುಗೈದು ಪರಾರಿಯಾಗಿದ್ದಾರೆ. ಕಳ್ಳರು ದೇವಸ್ಥಾನ ಬೀಗ ಮುರಿದು ಒಳನುಗ್ಗಿ ಕಾಣಿಕೆ ಡಬ್ಬಿ ಕಳವು ಗೈದಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವಾದ ನಾಲ್ಕು ಕಾಣಿಕೆ ಡಬ್ಬಿಯಲ್ಲಿ ಭಕ್ತರು ಕಾಣಿಕೆ ಹಾಕಿದ ರೂ.೩೦ ಸಾವಿರದಷ್ಟು ಹಣ ಇತ್ತೆಂದು ಅಂದಾಜಿಸಲಾಗಿದೆ. ನಿಡಿಗಲ್ ಶ್ರೀ ಲೋಕನಥೇಶ್ವರ ದೇವಸ್ಥಾನದ ಸಿರಿ ಜಾತ್ರೋತ್ಸವ ಇತ್ತಿಚೇಗೆ ಆದ್ದೂರಿಯಾಗಿ ಜರುಗಿತ್ತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸಮಿತಿ ಸದಸ್ಯರು, ಊರವರು ದೇವಸ್ಥಾನಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Related posts

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಭಜರಂಗದಳ ನಿಷೇಧ ನಿರ್ಧಾರಕ್ಕೆ ಮತದಾನದ ದಿನ ಹಿಂದೂ ಸಮಾಜ ಉತ್ತರ ನೀಡಲಿದೆ: ಹರೀಶ್ ಪೂಂಜ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
error: Content is protected !!