September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ವತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ SIR ಮತ್ತು ವೋಟ್ ಮ್ಯಾಪಿಂಗ್ ಬಗ್ಗೆ ಇಂದು ಗುರುವಾಯನಕೆರೆ ಎಫ್ ಎಮ್ ಗಾರ್ಡನ್ ಸಭಾಂಗಣದಲ್ಲಿ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಗಾರವನ್ನು ಉದ್ದೇಶಿಸಿ ಮಂಗಳೂರು ಮೆಸ್ಕಾಂ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿದರು.

ತರಬೇತಿ ಮತ್ತು ಮಾಹಿತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಎಚ್.ವಿ ವಾಸು, ಬೆಂಗಳೂರು ಮೋಹನ್ ಜಿ.ಕೆ, ಮೈಸೂರು ಸಂತೋಷ್‌.ಜಿ, ಬೆಂಗಳೂರು ನಿಜಾರ್‌ ಅಹಮ್ಮದ್, ಬೆಂಗಳೂರು ನಡೆಸಿಕೊಟ್ಟರು. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟಣ ಸ್ವಾಗತಿಸಿ, ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಉಪಸ್ಥಿತರಿದ್ದರು . ಕಾರ್ಯಾಗಾರದಲ್ಲಿ, ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಗ್ರಾಮ ಸಮಿತಿ ಅಧ್ಯಕ್ಷರು, ಬೂತ್ ಅಧ್ಯಕ್ಷರು, ಬಿಎಲ್ಎ 2 ಗಳು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ರೆಖ್ಯ ಬಿಜೆಪಿ ಕಾರ್ಯಕರ್ತರಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಮಹಿಳಾ ಗ್ರಾಮ ಸಭೆ ಮತ್ತು ಉದ್ಯೋಗ ಖಾತರಿ ಯೋಜನೆಯ ಕ್ರಿಯಾ ಯೋಜನೆ ವಿಶೇಷ ಗ್ರಾಮ ಸಭೆ

Suddi Udaya

ಧರ್ಮಸ್ಥಳ: ಕು. ಸೌಜನ್ಯ ಮನೆಗೆ ಕಲ್ಲಡ್ಕ ಡಾ. ಪ್ರಭಾಕರ್ ಭಟ್ ಭೇಟಿ

Suddi Udaya

ಲಾಯಿಲದ ಯುವಕ ನೇಣುಬಿಗಿದು ಆತ್ಮಹತ್ಯೆಗೆ ಶರಣು

Suddi Udaya

ಮಾಜಿ ಸಚಿವ ಗಂಗಾಧರ ಗೌಡರವರ ಕಚೇರಿಯಲ್ಲಿ ಇಂದಿರಾ ಗಾಂಧಿ ಯವರ ಪುಣ್ಯಸ್ಮರಣೆ ಆಚರಣೆ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!