August 3, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಬೀಗ ಮುರಿದು ಒಳನುಗ್ಗಿದ ಕಳ್ಳರು: ನಾಲ್ಕು ಕಾಣಿಕೆ ಡಬ್ಬಿಗಳ ಕಳವು

ಬೆಳ್ತಂಗಡಿ: ಕನ್ಯಾಡಿ | ಗ್ರಾಮದ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಎದುರಿನ ಬೀಗವನ್ನು ಮುರಿದು ಕಳ್ಳರು ದೇವರ ನಾಲ್ಕು ಕಾಣಿಕೆ ಡಬ್ಬಿಗಳನ್ನು ಕಳವುಗೈದ ಘಟನೆ ಎ.೨೨ರಂದು ವರದಿಯಾಗಿದೆ.

ಎ.21ರಂದು ರಾತ್ರಿ ಸುಮಾರು ೨ ಗಂಟೆಯ ವೇಳೆಗೆ ದೇವಸ್ಥಾನದ ಎದುರಿನ ಬಾಗಿಲ ಬೀಗವನ್ನು ಯಾವುದೇ ಆಯುಧರಿಂದ ಮೀಟಿ ಮುರಿದು ಒಳನುಗ್ಗಿದ ಕಳ್ಳರು ದೇವಸ್ಥಾನದ ಒಳಗೆ ಇದ್ದ ಒಂದು ದೊಡ್ಡ ಕಾಣಿಕೆ ಡಬ್ಬಿ ಹಾಗೂ ಮೂರು ಸಣ್ಣ ಕಾಣಿಕೆ ಡಬ್ಬಿಯನ್ನು ಕಳವುಗೈದು ಪರಾರಿಯಾಗಿದ್ದಾರೆ. ಕಳ್ಳರು ದೇವಸ್ಥಾನ ಬೀಗ ಮುರಿದು ಒಳನುಗ್ಗಿ ಕಾಣಿಕೆ ಡಬ್ಬಿ ಕಳವು ಗೈದಿರುವುದು ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಕಳವಾದ ನಾಲ್ಕು ಕಾಣಿಕೆ ಡಬ್ಬಿಯಲ್ಲಿ ಭಕ್ತರು ಕಾಣಿಕೆ ಹಾಕಿದ ರೂ.೩೦ ಸಾವಿರದಷ್ಟು ಹಣ ಇತ್ತೆಂದು ಅಂದಾಜಿಸಲಾಗಿದೆ. ನಿಡಿಗಲ್ ಶ್ರೀ ಲೋಕನಥೇಶ್ವರ ದೇವಸ್ಥಾನದ ಸಿರಿ ಜಾತ್ರೋತ್ಸವ ಇತ್ತಿಚೇಗೆ ಆದ್ದೂರಿಯಾಗಿ ಜರುಗಿತ್ತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಹಾಗೂ ಸಮಿತಿ ಸದಸ್ಯರು, ಊರವರು ದೇವಸ್ಥಾನಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Related posts

ಭಾರತ್ ಬೀಡಿ ಕಂಪೆನಿ ಉಳಿಸಿ ಭಾರತ್ ಬೀಡಿ ಕಂಪೆನಿ ಎದುರು ಸಿಐಟಿಯು ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ

Suddi Udaya

ಬೆನ್ನುಹುರಿಯ ದ್ರವ ತುಂಬಿದ ಚೀಲಗಳ ಎಂಡೋಸ್ಕೋಪಿಕ್ ಸರ್ಜರಿ: ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮತ್ತೊಂದು ಅಪರೂಪದ ಶಸ್ತ್ರಚಿಕಿತ್ಸೆ

Suddi Udaya

ಓಡಿಲ್ನಾಳ: ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ; ಕಳಿಯ ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷ ವಸಂತ ಮಜಲು ಭೇಟಿ ನೀಡಿ ತುರ್ತು ಪರಿಹಾರ

Suddi Udaya

ಸಹಾಯಕ ಕಾನೂನು ಅಭಿರಕ್ಷಕರಾಗಿ ನ್ಯಾಯವಾದಿ ಕುಮಾರಿ ಸ್ವಾತಿ ಕುಲಾಲ್ ನೇಮಕ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಮೂಡಬಿದ್ರಿ ಕೋಟೆಬಾಗಿಲು ದ ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!