23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದ ನಿವಾಸಿ ಪರಿಶಿಷ್ಟ ಜಾತಿಯ ಬಡ ಕುಟುಂಬದ ಸುಂದರ ಎಂಬವರ ನೂತನ ಮನೆಯ ಭೂಮಿ ಪೂಜೆ ಕಾರ್ಯಕ್ರಮವು ಏ.೨೧ ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಇಸ್ರೇಲ್‌ನಲ್ಲಿ ಉದ್ಯೋಗದಲ್ಲಿರುವ ಅನಿವಾಸಿ ಭಾರತೀಯ ಕನ್ನಡಿಗರು ಹಾಗೂ ಮರೋಡಿ ಬಿಜೆಪಿ ಗ್ರಾಮ ಸಮಿತಿಯ ಜಂಟಿ ಸಹಕಾರ ಮತ್ತು ದಾನಿಗಳ ಉದಾರ ದೇಣಿಗೆಯಿಂದ ಈ ಸುಸಜ್ಜಿತ ಮನೆಯ ನಿರ್ಮಾಣದ ಭೂಮಿ ಪೂಜೆ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೂತನ ಮನೆಯ ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಮಾತನಾಡಿ, ರಾಷ್ಟೀಯ ಸ್ವಯಂ ಸೇವಕ ಸಂಘವು ನೂರರ ಸಂಭ್ರಮದಲ್ಲಿದ್ದು ಇದರ ನೆನಪಿಗಾಗಿ ಬಡ ಕುಟುಂಬಕ್ಕೆ ಸೂರು ನಿರ್ಮಾಣವಾಗುತ್ತಿರುವುದು ಸಂತೋಷದ ಸಂಗತಿ. ಈ ಮನೆಯ ಗೃಹಪ್ರವೇಶ ಆಗುವವರೆಗೂ ನಿಮ್ಮ ಜೊತೆ ಸದಾ ಇರುತ್ತೇನೆ ಎಂದು ಭರವಸೆ ನೀಡಿದರು.

ಬಿಜೆಪಿ ಮಂಗಳೂರು ಸಹಪ್ರಭಾರಿಗಳಾದ ಜಯಂತ್ ಕೋಟ್ಯಾನ್, ಇಸ್ರೇಲ್‌ನ ಅನಿವಾಸಿ ಕನ್ನಡಿಗರ ಪರವಾಗಿ ಸುಧೀರ್ ಕೋಟ್ಯಾನ್, ಮರೋಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ರತ್ನಾಕರ ಬುಣ್ಣನ್, ಮಾಜಿ ಅಧ್ಯಕ್ಷ ಬಾಲಕೃಷ್ಣ ಬಂಗೇರ, ಪದ್ಮಶ್ರೀ ಜೈನ್ ಪಂಚಾಯತ್ ನಿಕಟಪೂರ್ವ ಸದಸ್ಯ ಉಮೇಶ್ ಸಾಲ್ಯಾನ್ ಹಾಗೂ ಸುನಂದ, ಅಂಗಡಿಬೆಟ್ಟು ಗುತ್ತುವಿನ ಭರತ್ ಕುಮಾರ್ ಜೈನ್, ನಿವೃತ್ತ ಮುಖ್ಯೋಪಾಧ್ಯಾಯರಾದ ಟಿ.ಕೆ. ವೆಂಕಟರಮಣ ಹಾಗೂ ಬಿಜೆಪಿ ಗ್ರಾಮ ಸಮಿತಿಯ ಅಧ್ಯಕ್ಷರು ಭಾಗವಹಿಸಿ ಸುಂದರ ಅವರ ಕುಟುಂಬಕ್ಕೆ ಶುಭಹಾರೈಸಿದರು.

Related posts

ಅರಸಿನಮಕ್ಕಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಉದ್ಘಾಟನೆ

Suddi Udaya

ಮಾ.30: ಲಕ್ಷ್ಮೀ ಇಂಡಸ್ಟೀಸ್ “ಕನಸಿನ ಮನೆ” ವಾಮದಪದವು ಶಾಖೆ ಶುಭಾರಂಭ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ

Suddi Udaya
error: Content is protected !!