36.1 C
ಪುತ್ತೂರು, ಬೆಳ್ತಂಗಡಿ
April 27, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

ಬಳಂಜ: ತಡರಾತ್ರಿ ಕಿಡಿಗೇಡಿಯೊಬ್ಬ ಏಕಾಎಕಿ ದಾಂಧಲೆ ಎಬ್ಬಿಸಿ, ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಕ್ಕೆ ನುಗ್ಗಿ ದೇವರ ಮೂರ್ತಿಯನ್ನು ಭಗ್ನಗೊಳಿಸಿದ ಘಟನೆ ಎ.22ರಂದು ತಡರಾತ್ರಿ ನಡೆದಿದೆ.

ಘಟನೆ ವಿವರ: ಕಳೆದ ರಾತ್ರಿ ಸಮಯ ಎರಡು ಗಂಟೆಗೆ ಕಪ್ಪು ಕಲರಿನ ಥಾರ್ ವಾಹನದಲ್ಲಿ ದೇವಸ್ಥಾನದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ಬಂದ ಅಜೇಯ್ ಎಂಬ ಕೀಡಿಗೇಡಿ “ಎನನ್ ಬಚಾವ್ ಮಲ್ಪಿ” ಎಂದು ಜೋರಾಗಿ ಕೂಗಾಡಿ ಮನೆಗೆ ನುಗ್ಗಲು ಯತ್ನಿಸಿದಾಗ ಮನೆಯರು ಜೋರು ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಬಳಿಕ ಕೀಡಿಗೇಡಿ ಬಳಂಜ ದೇವಸ್ಥಾನದ ಪವಿತ್ರವಾದ ದೇವರ ಜಲಕದ ಕೆರೆಗೆ ಹಾರಿ ಅಲ್ಲಿಂದ ಸೀದಾ ದೇವಸ್ಥಾನಕ್ಕೆ ಬಂದು ಕಂಬದ ಮೂಲಕ ದೇವಸ್ಥಾನದ ಮೇಲೆ ಹೋಗಿ ಹಂಚು ತೆಗೆದು ಒಳನುಗ್ಗಿ ಕೊಡಮಣಿತ್ತಾಯ ದೈವದ ಗುಡಿಗೆ ಇಳಿದು ದೈವದ ಮಣೆ ಮಂಚದಲ್ಲಿದ್ದ ಘಂಟಾಮಣಿಯನ್ನು ತೆಗೆದು ದೇವಸ್ಥಾನ ಮೇಲ್ಚಾವಣಿಯಲ್ಲಿ ಹಂಚುಗಳ ಪಕ್ಕದಲ್ಲಿ ಇಟ್ಟು ವಿಕೃತಿ ಮೆರೆದಿದ್ದಾನೆ.

ಬಳಿಕ ದೇವಸ್ಥಾನ ತೀರ್ಥ ಮಂಟಪದ ಬಳಿಯಿರುವ ದೊಡ್ಡ ಘಂಟೆಯನ್ನು ಬಾರಿಸಿ, ಗೋಪಾಲಕೃಷ್ಣ ದೇವರ ಗುಡಿಯೊಳಗೆ ನುಗ್ಗಿ ದೇವರ ವಿಗ್ರಹವನ್ನು ತೆಗೆದು ನೆಲಕ್ಕೆ ಎಸೆದು ಭಗ್ನಗೊಳಿಸಿದ್ದಾನೆ. ಗುಡಿಯೊಳಗಿದ್ದ ದೇವರ ಪರಿಕರಗಳನ್ನು ಚೆಲ್ಲಾಪಿಲ್ಲಿಗೊಳಿಸಿ ವಿಕೃತಿ ಮರೆದಿದ್ದಾನೆ.

ಈ ಘಟನೆಯ ಬಗ್ಗೆ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್ ಅವರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯಿಂದ ಸ್ಥಳೀಯರ ದೇವಸ್ಥಾನದ ಭಕ್ತ ವರ್ಗದಲ್ಲಿ ದಿಗ್ಭ್ರಮೆ ಮೂಡಿಸಿದ್ದು ಈ ಘಟನೆಯಿಂದ ಆತಂಕ ಕೂಡ ನಿರ್ಮಾಣವಾಗಿದೆ.

ಪೋಲಿಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಿಡಿಗೇಡಿಯ ಈ ಕೃತ್ಯಕ್ಕೆ ಕಾರಣವೇನು ಎಂಬುದು ನಿಗೂಢವಾಗಿದೆ.ಇತ್ತಿಚೀನ ದಿನಗಳಲ್ಲಿ ರಾತ್ರಿ ತಿರುಗುವ ವಾಹನ, ಗಾಂಜಾ, ಡ್ರಗ್ಸ್ ಬಗ್ಗೆ ಗಾಳಿ ಸುದ್ದಿಯಿದ್ದು ಇದರ ಬಗ್ಗೆಯೂ ತನಿಖೆ ಆಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಕೀಡಿಗೇಡಿಯ ಕಪ್ಪು ಬಣ್ಣದ ಥಾರ್ ವಾಹನ ಸುಬ್ರಹ್ಮಣ್ಯ ಭಟ್ ಅವರ ಮನೆಯಂಗಳದಲ್ಲಿದೆ.

Related posts

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya

ಮಹಾಮಂಡಲೇಶ್ವರ ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ ಮಾ.17:ಉಡುಪಿಯ ಅಮೃತ ಗಾರ್ಡನ್ ನಲ್ಲಿ ಬೃಹತ್ ಅಪ್ರೆಂಟಿಸ್ಶಿಪ್ ಮೇಳ ಹಾಗೂ ಬೃಹತ್ ಉದ್ಯೋಗ ಮೇಳ

Suddi Udaya

ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya

ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಬೆಳ್ತಂಗಡಿ ಠಾಣೆಗೆ ಕರೆತಂದ ಪೊಲೀಸರು

Suddi Udaya

ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ “ಮಾಮ್” ಪ್ರಶಸ್ತಿಯ ಗರಿ

Suddi Udaya

ಹಿರಿಯ ಯಕ್ಷಗಾನ ಕಲಾವಿದ, ನಿವೃತ್ತ ಶಿಕ್ಷಕ ಎಸ್.ಬಿ. ನರೇಂದ್ರ ಕುಮಾರ್ ನಿಧನ

Suddi Udaya
error: Content is protected !!