August 2, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

ಬಳಂಜ: ತಡರಾತ್ರಿ ಕಿಡಿಗೇಡಿಯೊಬ್ಬ ಏಕಾಎಕಿ ದಾಂಧಲೆ ಎಬ್ಬಿಸಿ, ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಕ್ಕೆ ನುಗ್ಗಿ ದೇವರ ಮೂರ್ತಿಯನ್ನು ಭಗ್ನಗೊಳಿಸಿದ ಘಟನೆ ಎ.22ರಂದು ತಡರಾತ್ರಿ ನಡೆದಿದೆ.

ಘಟನೆ ವಿವರ: ಕಳೆದ ರಾತ್ರಿ ಸಮಯ ಎರಡು ಗಂಟೆಗೆ ಕಪ್ಪು ಕಲರಿನ ಥಾರ್ ವಾಹನದಲ್ಲಿ ದೇವಸ್ಥಾನದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ಬಂದ ಅಜೇಯ್ ಎಂಬ ಕೀಡಿಗೇಡಿ “ಎನನ್ ಬಚಾವ್ ಮಲ್ಪಿ” ಎಂದು ಜೋರಾಗಿ ಕೂಗಾಡಿ ಮನೆಗೆ ನುಗ್ಗಲು ಯತ್ನಿಸಿದಾಗ ಮನೆಯರು ಜೋರು ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಬಳಿಕ ಕೀಡಿಗೇಡಿ ಬಳಂಜ ದೇವಸ್ಥಾನದ ಪವಿತ್ರವಾದ ದೇವರ ಜಲಕದ ಕೆರೆಗೆ ಹಾರಿ ಅಲ್ಲಿಂದ ಸೀದಾ ದೇವಸ್ಥಾನಕ್ಕೆ ಬಂದು ಕಂಬದ ಮೂಲಕ ದೇವಸ್ಥಾನದ ಮೇಲೆ ಹೋಗಿ ಹಂಚು ತೆಗೆದು ಒಳನುಗ್ಗಿ ಕೊಡಮಣಿತ್ತಾಯ ದೈವದ ಗುಡಿಗೆ ಇಳಿದು ದೈವದ ಮಣೆ ಮಂಚದಲ್ಲಿದ್ದ ಘಂಟಾಮಣಿಯನ್ನು ತೆಗೆದು ದೇವಸ್ಥಾನ ಮೇಲ್ಚಾವಣಿಯಲ್ಲಿ ಹಂಚುಗಳ ಪಕ್ಕದಲ್ಲಿ ಇಟ್ಟು ವಿಕೃತಿ ಮೆರೆದಿದ್ದಾನೆ.

ಬಳಿಕ ದೇವಸ್ಥಾನ ತೀರ್ಥ ಮಂಟಪದ ಬಳಿಯಿರುವ ದೊಡ್ಡ ಘಂಟೆಯನ್ನು ಬಾರಿಸಿ, ಗೋಪಾಲಕೃಷ್ಣ ದೇವರ ಗುಡಿಯೊಳಗೆ ನುಗ್ಗಿ ದೇವರ ವಿಗ್ರಹವನ್ನು ತೆಗೆದು ನೆಲಕ್ಕೆ ಎಸೆದು ಭಗ್ನಗೊಳಿಸಿದ್ದಾನೆ. ಗುಡಿಯೊಳಗಿದ್ದ ದೇವರ ಪರಿಕರಗಳನ್ನು ಚೆಲ್ಲಾಪಿಲ್ಲಿಗೊಳಿಸಿ ವಿಕೃತಿ ಮರೆದಿದ್ದಾನೆ.

ಈ ಘಟನೆಯ ಬಗ್ಗೆ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್ ಅವರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯಿಂದ ಸ್ಥಳೀಯರ ದೇವಸ್ಥಾನದ ಭಕ್ತ ವರ್ಗದಲ್ಲಿ ದಿಗ್ಭ್ರಮೆ ಮೂಡಿಸಿದ್ದು ಈ ಘಟನೆಯಿಂದ ಆತಂಕ ಕೂಡ ನಿರ್ಮಾಣವಾಗಿದೆ.

ಪೋಲಿಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಿಡಿಗೇಡಿಯ ಈ ಕೃತ್ಯಕ್ಕೆ ಕಾರಣವೇನು ಎಂಬುದು ನಿಗೂಢವಾಗಿದೆ.ಇತ್ತಿಚೀನ ದಿನಗಳಲ್ಲಿ ರಾತ್ರಿ ತಿರುಗುವ ವಾಹನ, ಗಾಂಜಾ, ಡ್ರಗ್ಸ್ ಬಗ್ಗೆ ಗಾಳಿ ಸುದ್ದಿಯಿದ್ದು ಇದರ ಬಗ್ಗೆಯೂ ತನಿಖೆ ಆಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಕೀಡಿಗೇಡಿಯ ಕಪ್ಪು ಬಣ್ಣದ ಥಾರ್ ವಾಹನ ಸುಬ್ರಹ್ಮಣ್ಯ ಭಟ್ ಅವರ ಮನೆಯಂಗಳದಲ್ಲಿದೆ.

Related posts

ಬಳ್ಳಮಂಜ ಬ್ರಹ್ಮಕಲಶೋತ್ಸವ-ಶ್ರೀ ಅನಂತ ಮತ್ತು ಶ್ರೀ ಈಶ್ವರ ದೇವರ ಬ್ರಹ್ಮಕಲಶಾಭೀಷೇಕ-ಬ್ರಹ್ಮರಥೋತ್ಸವ

Suddi Udaya

ಡಿ.21: ಸೋಮಂತ್ತಡ್ಕದಲ್ಲಿ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಉದ್ಘಾಟನೆ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಭಾರತೀಯ ಮಜ್ದೂರ್ ಸಂಘದಿಂದ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

Suddi Udaya

ಜೂ.30: ಬೆಳ್ತಂಗಡಿ ಬ್ಯಾಂಕ್ ಆಫ್ ಬರೋಡದಿಂದ ಇಂಡಿಯಾ ಫಸ್ಟ್ ಲೈಫ್ ಕಛೇರಿ ಉದ್ಘಾಟನೆ

Suddi Udaya

ಉಜಿರೆ ಯುವ ವಾಹಿನಿ ಸಂಚಲನಾ ಸಮಿತಿ ಮತ್ತು ಶ್ರೀ ಗುರುನಾರಾಯಣ ಸೇವಾ ಸಂಘದ ಆಶ್ರಯದಲ್ಲಿ ಗುರುಪೂಜೆ

Suddi Udaya
error: Content is protected !!