September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

ಬೆಳ್ತಂಗಡಿ: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ, ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವನ ಮೇಲೆ ಹಲ್ಲೆ ನಡೆದಿರುವ ಘಟನೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ ನಡೆದಿದೆ.

ಆದಿಲ್ ಹುಸೈನ್ ಏ.22 ರಂದು ಸಂಜೆ, ಕಾಲೇಜಿನಿಂದ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಎಂಬವರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿರುವಾಗ, ಪಿರ್ಯಾದಿದಾರರ ಪರಿಚಯದ ಆರೋಪಿಗಳಾದ ಬಿಕೆ ಮೊಯಿನುದ್ದೀನ್, ಮೋಹದ್ ಹಾಗೂ ಇತರ 5 ಜನ ಬಂದು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿರುತ್ತಾರೆ.

ಆಗ ಪಿರ್ಯಾದಿದಾರರ ಜೊತೆಯಲ್ಲಿದ್ದ ಸ್ನೇಹಿತರು ಹಲ್ಲೆಯ ಬಗ್ಗೆ ಪ್ರಶ್ನಿಸಿದಾಗ ಅವರಿಗೂ ಅರೋಪಿಗಳು ಬೆದರಿಕೆ ಒಡ್ಡಿದ್ದು, ಅಲ್ಲಿದ್ದ ಸಾರ್ವಜನಿಕರು ಗಲಾಟೆಯನ್ನು ಬಿಡಿಸಲು ಬಂದಾಗ ಆರೋಪಿಗಳು ಪಿರ್ಯಾದಿದಾರರಿಗೆ ಅವ್ಯಾಚವಾಗಿ ಬೈದು, ಜೀವಬೆದರಿಕೆ ಒಡ್ಡಿ ಸ್ಥಳದಿಂದ ತೆರಳಿರುತ್ತಾರೆ. ಹಲ್ಲೆಯಿಂದಾದ ಗಾಯಕ್ಕೆ ಪಿರ್ಯಾದಿರವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಕೆಲವು ತಿಂಗಳ ಹಿಂದೆ ಪಿರ್ಯಾದಿದಾರರ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ಮತ್ತು ಇತರರು ಹೊಡೆಯುತ್ತಿರುವಾಗ ಗಲಾಟೆಯನ್ನು ಪಿರ್ಯಾದಿದಾರರು ಬಿಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳು ತನ್ನ ಮೆಲೆ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 49/2026, ಕಲಂ: 189(2), 191(2), 191(3), 352,115(2), 118(1),351(2), ಜೊತೆಗೆ 190 ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಕೊಯ್ಯೂರು: ಸೋಮಾವತಿ ನದಿ ಕಿನಾರೆಯಿಂದ ಅಕ್ರಮ ಮರಳು ಸಾಗಟ: ಬೆಳ್ತಂಗಡಿ ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಸ್ಥಳದಲ್ಲಿದ್ದ ರೂ. 23.56 ಲಕ್ಷ ಮೌಲ್ಯದ ವಾಹನ ಹಾಗೂ ಸೊತ್ತುಗಳ ವಶ

Suddi Udaya

ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ರಕ್ಷಾಬಂಧನ ಆಚರಣೆ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಮೌಲ್ಯ ನಾಯಕ್ ರವರಿಗೆ ಸಂಸ್ಕೃತ ಒಲಂಪಿಯಾಡ್ ನಲ್ಲಿ ಸ್ವರ್ಣಪದಕ

Suddi Udaya

ಬೆಳ್ತಂಗಡಿ ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯಿಂದ ವಾರ್ಷಿಕ ಮಹಾಸಭೆ: ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಹ್ಯಾಂಡ್‌ಬಾಲ್‌ ಪಂದ್ಯಾಟ : ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸಾ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!