26.9 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

ಬೆಳ್ತಂಗಡಿ: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ, ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವನ ಮೇಲೆ ಹಲ್ಲೆ ನಡೆದಿರುವ ಘಟನೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ ನಡೆದಿದೆ.

ಆದಿಲ್ ಹುಸೈನ್ ಏ.22 ರಂದು ಸಂಜೆ, ಕಾಲೇಜಿನಿಂದ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಎಂಬವರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿರುವಾಗ, ಪಿರ್ಯಾದಿದಾರರ ಪರಿಚಯದ ಆರೋಪಿಗಳಾದ ಬಿಕೆ ಮೊಯಿನುದ್ದೀನ್, ಮೋಹದ್ ಹಾಗೂ ಇತರ 5 ಜನ ಬಂದು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿರುತ್ತಾರೆ.

ಆಗ ಪಿರ್ಯಾದಿದಾರರ ಜೊತೆಯಲ್ಲಿದ್ದ ಸ್ನೇಹಿತರು ಹಲ್ಲೆಯ ಬಗ್ಗೆ ಪ್ರಶ್ನಿಸಿದಾಗ ಅವರಿಗೂ ಅರೋಪಿಗಳು ಬೆದರಿಕೆ ಒಡ್ಡಿದ್ದು, ಅಲ್ಲಿದ್ದ ಸಾರ್ವಜನಿಕರು ಗಲಾಟೆಯನ್ನು ಬಿಡಿಸಲು ಬಂದಾಗ ಆರೋಪಿಗಳು ಪಿರ್ಯಾದಿದಾರರಿಗೆ ಅವ್ಯಾಚವಾಗಿ ಬೈದು, ಜೀವಬೆದರಿಕೆ ಒಡ್ಡಿ ಸ್ಥಳದಿಂದ ತೆರಳಿರುತ್ತಾರೆ. ಹಲ್ಲೆಯಿಂದಾದ ಗಾಯಕ್ಕೆ ಪಿರ್ಯಾದಿರವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಕೆಲವು ತಿಂಗಳ ಹಿಂದೆ ಪಿರ್ಯಾದಿದಾರರ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ಮತ್ತು ಇತರರು ಹೊಡೆಯುತ್ತಿರುವಾಗ ಗಲಾಟೆಯನ್ನು ಪಿರ್ಯಾದಿದಾರರು ಬಿಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳು ತನ್ನ ಮೆಲೆ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 49/2026, ಕಲಂ: 189(2), 191(2), 191(3), 352,115(2), 118(1),351(2), ಜೊತೆಗೆ 190 ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಕಡಿರುದ್ಯಾವರ ಆನೆ ಸಂತ್ರಸ್ತರ ಹೋರಾಟ ಸಮಿತಿಯಿಂದ ಕಾಡಂಚಿನಲ್ಲಿ ಆನೆಕಂದಕ ಮತ್ತು ಸೋಲಾರ್ ವಿದ್ಯುತ್ ಬೇಲಿ ರಚನೆಯ ಬೇಡಿಕೆಗೆ ಮನವಿ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya
error: Content is protected !!