September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

ಉಜಿರೆ: ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ, ಶ್ರೀ ಗುರುನಾರಾಯಣ ಸೇವಾ ಸಂಘ ಉಜಿರೆ ಇದರ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ,ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ ಹಾಗೂ ಶ್ರೀ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ಏ.24ರಂದು ಜರುಗಲಿದೆ ಎಂದು ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಉಜಿರೆ ಇದರ ಅಧ್ಯಕ್ಷ ರವಿಕುಮಾರ್ ಬರಮೇಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ.23ರಂದು ಸಂಜೆ ತಂತ್ರಿವರ್ಯರು ಶ್ರೀ ಕೃಷ್ಣ ಗುರೂಜಿ ಧರ್ಮದರ್ಶಿಗಳು ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ಮಾಣಿಲ ಕುಕ್ಕಾಜೆ ಇವರ ಆಗಮನ ಪೂರ್ಣ ಕುಂಭ ಸ್ಚಾಗತ, ಆಚಾರ್ಯವರಣ ಸಾಮೂಹಿಕ ಪ್ರಾರ್ಥನೆ, ಪ್ರಸಾದ ಪರಿಗ್ರಹ, ಪ್ರಸಾದ ಶುಧಿ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ವಾಸ್ತು ಬಲಿ, ರಾತ್ರಿ ಅನ್ನಸಂತರ್ಪಣೆ ನಡೆಯುವುದು.

ಏ.24ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ಗುರುನಾರಾಯಣ ಸ್ವಾಮಿಯ ಪೀಠ ಪ್ರತಿಷ್ಠೆ, ಕಲಶಾಭಿಷೇಕ ಶ್ರಿ ನಾರಾಯಣ ಗುರುಗಳ ಛಾಯಚಿತ್ರ ಪ್ರತಿಷ್ಠೆ ಹಾಗೂ ಗುರುಮಂದಿರ ಉದ್ಘಾಟನೆ, ಗುರುಪೂಜೆ, ಸತ್ಯನಾರಾಯಣ ಪೂಜೆ, ವಿವಿಧ ತಂಡಗಳಿಂದ ಭಜನೆನ ಮಧ್ಯಾಹ್ನ ಅನ್ನಸಂತರ್ಪಣೆ ಜರಗುವುದು.

Related posts

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಸ್ವಾತಿ ಫಡಕೆಯವರಿಗೆ ಡಾಕ್ಟರೇಟ್ ಪದವಿ

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಜಿಲ್ಲಾ ರೈತ ತರಬೇತಿ ಕೇಂದ್ರ ಹಾಗೂ ಒಕ್ಕೂಟದ ವತಿಯಿಂದ ರೈತ ತರಬೇತಿ ಕಾರ್ಯಕ್ರಮ

Suddi Udaya

ಬಡಗಕಜೆಕಾರು: ಹರಿಶ್ಚಂದ್ರ ಪೂಜಾರಿ ಕನಪಾಡಿಬೆಟ್ಟು ನಿಧನ

Suddi Udaya
error: Content is protected !!