ಉಜಿರೆ: ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ, ಶ್ರೀ ಗುರುನಾರಾಯಣ ಸೇವಾ ಸಂಘ ಉಜಿರೆ ಇದರ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ,ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ ಹಾಗೂ ಶ್ರೀ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ಏ.24ರಂದು ಜರುಗಲಿದೆ ಎಂದು ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಉಜಿರೆ ಇದರ ಅಧ್ಯಕ್ಷ ರವಿಕುಮಾರ್ ಬರಮೇಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏ.23ರಂದು ಸಂಜೆ ತಂತ್ರಿವರ್ಯರು ಶ್ರೀ ಕೃಷ್ಣ ಗುರೂಜಿ ಧರ್ಮದರ್ಶಿಗಳು ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ಮಾಣಿಲ ಕುಕ್ಕಾಜೆ ಇವರ ಆಗಮನ ಪೂರ್ಣ ಕುಂಭ ಸ್ಚಾಗತ, ಆಚಾರ್ಯವರಣ ಸಾಮೂಹಿಕ ಪ್ರಾರ್ಥನೆ, ಪ್ರಸಾದ ಪರಿಗ್ರಹ, ಪ್ರಸಾದ ಶುಧಿ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ವಾಸ್ತು ಬಲಿ, ರಾತ್ರಿ ಅನ್ನಸಂತರ್ಪಣೆ ನಡೆಯುವುದು.
ಏ.24ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ಗುರುನಾರಾಯಣ ಸ್ವಾಮಿಯ ಪೀಠ ಪ್ರತಿಷ್ಠೆ, ಕಲಶಾಭಿಷೇಕ ಶ್ರಿ ನಾರಾಯಣ ಗುರುಗಳ ಛಾಯಚಿತ್ರ ಪ್ರತಿಷ್ಠೆ ಹಾಗೂ ಗುರುಮಂದಿರ ಉದ್ಘಾಟನೆ, ಗುರುಪೂಜೆ, ಸತ್ಯನಾರಾಯಣ ಪೂಜೆ, ವಿವಿಧ ತಂಡಗಳಿಂದ ಭಜನೆನ ಮಧ್ಯಾಹ್ನ ಅನ್ನಸಂತರ್ಪಣೆ ಜರಗುವುದು.












