22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಏ.24-26: ಕುಂಡದಬೆಟ್ಟು ಮಖಾಂ ಶರೀಫ್ ಉರೂಸ್

ಬೆಳ್ತಂಗಡಿ: ಕುಂಡದಬಿಟ್ಟು ಮುಹಿಯುದ್ದೀನ್ ಜುಮ್ಮಾ ಮಸ್ಟಿದ್ ನಿಟ್ಟಡೆ, ಕುಂಡದಬೆಟ್ಟು ದರ್ಗಾ ವಠಾರದಲ್ಲಿ ಮರ್‌ಹೂಮ್ ಇಬ್ರಾಹಿಂ ಉಸ್ತಾದ್ ಇವರ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಕುಂಡದಬೆಟ್ಟು ಮಖಾಂ ಊರೂಸ್ ಎ.24 ರಿಂದ 26ರ ವರೆಗೆ ನಡೆಯಲಿದೆ ಎಂದು ಕುಂಡದಬೆಟ್ಟು ಎಂಜೆಎA ಖತೀಬ್ ಮುಹಮ್ಮದ್ ಹನೀಫ್ ಸಖಾಫಿ ಹೇಳಿದರು.
ಅವರು ಎ.22ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.

ಎ.24ರಂದು ರಾತ್ರಿ ಉರೂಸ್ ಸಮಿತಿ ಅಧ್ಯಕ್ಷ ಅಬುಸಾಲಿ ಜಿ. ಧ್ವಜಾರೋಹಣ ಮಾಡಲಿದ್ದಾರೆ. ಕಾವಳಕಟ್ಟೆ ಡಾ. ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ದುಆ ಆಶೀರ್ವಚನ ಮಾಡುವರು. ಕೇರಳದ ಖಾಸಿಂ ಕಾಮಿಲ್ ಸಖಾಫಿ ಸಂಗಡಿಗರಿAದ ಗ್ರ‍್ಯಾಂಡ್ ಇಶಲ್ ನೈಟ್ ನಡೆಯಲಿದೆ.

ಎ.25ರಂದು ಕರ್ನಾಟಕ ವಕ್ಫ್ ಮಂಡಳಿ ಮಾಜಿ ಅಧ್ಯಕ್ಷ ಎನ್.ಕೆ.ಎಂ. ಶಾಫಿ ಸಅದಿ ಉದ್ಘಾಟನೆ ಮಾಡುವರು. ಕಾಸರಗೋಡು ಊಜಂಪಾಡಿ ಖತೀಬ್ ಪಿ.ಎಸ್. ಮುಹಮ್ಮದ್ ಹಾಶಿರ್ ಸಖಾಫಿ ಆಲ್ ಸುರೈಜಿ ಪ್ರಧಾನ ಭಾಷಣ ಮಾಡಲಿದ್ದಾರೆ.

ಎ.26ರಂದು ಸಂಜೆ ಸೌಹಾರ್ದ ಸ್ನೇಹ ಸಂಗಮ ನಡೆಯಲಿದೆ. ಅಧ್ಯಕ್ಷತೆಯನ್ನು ಕುಂಡದಬೆಟ್ಟು ಎಂಜೆಎA ಅಧ್ಯಕ್ಷ ಮುತ್ತಲಿಬ್ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಎ. ಗಫೂರ್, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ.

ರಾತ್ರಿ ಉರೂಸ್ ಸಮಾರೋಪದಲ್ಲಿ ತೃಶೂರಿನ ಮುಳ್ಳೂರುಕೆರೆ ಮುಹಮ್ಮದಲಿ ಸಖಾಫಿ ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉರೂಸ್ ಸಮಿತಿ ಅಧ್ಯಕ್ಷ ಅಬುಸಾಲಿ ಜಿ., ಕುಂಡದಬೆಟ್ಟು ಎಂಜೆಎಂ ಅಧ್ಯಕ್ಷ ಮುತ್ತಲಿಬ್, ಕುಂಡದಬೆಟ್ಟು ಮದರಸದ ಸಹ ಅಧ್ಯಾಪಕ ಬಿ. ಹೆಚ್. ಹಾರಿಸ್ ಸಖಾಫಿ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿ : ಅರಿಕೆಗುಡ್ಡೆ ಸಮೀಪ ರಸ್ತೆಗೆ ಬಿದ್ದ ಮರ : 7 ವಿದ್ಯುತ್ ಕಂಬಗಳು ಧರಾಶಾಯಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನೇಜಿ ನೆಡುವ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಸಿವಿಲ್ ನ್ಯಾಯಾಧೀಶರಾದ ಮಂಜುನಾಥ ಶಿವಲಿಂಗಪ್ಪ ಜಿ.ರವರಿಗೆ ಸನ್ಮಾನ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya
error: Content is protected !!