22.6 C
ಪುತ್ತೂರು, ಬೆಳ್ತಂಗಡಿ
July 23, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಏ.26: ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಶುಭಾರಂಭ

ಅಳದಂಗಡಿ: ಇಲ್ಲಿಯ ಶ್ರೀ ಗೌರೀಶ್ವರ ಆವರಣದಲ್ಲಿ “ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್‌ಗಳು, ಕಂಪೌಂಡ್ ವಾಲ್‌ಗಳು,ಕಾಂಕ್ರೀಟ್ ಕಂಬಗಳು, ಮತ್ತು ಇತರ ಕಾಂಕ್ರೀಟ್ ಉತ್ಪನ್ನಗಳ ತಯಾರಿಕಾ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಏ.26ರಂದು ಜರುಗಲಿದೆ ಎಂದು ಸಂಸ್ಥೆಯ ಪಾಲುದಾರರಾದ ಅವನೀಶ ಕಟ್ಟೂರು, ಬಿ.ಇ. ಮತ್ತು ಅನುರುದ್ಧ ಕಟ್ಟೂರು, ಬಿ.ಇ.(ಸಿವಿಲ್) ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಂಕ್ರೀಟ್ ಸಾಲಿಡ್ ಬ್ಲಾಕ್ಸ್ 4″, 6″, 8″,ಕಾಂಕ್ರೀಟ್ ಕಂಪೌಂಡ್ ವಾಲ್,ಕಾಳುಮೆಣಸು ಕಂಬ,ಬೇಲಿ ಕಂಬ ಮತ್ತು ಇತರ ಕಾಂಕ್ರೀಟ್ ಉತ್ಪನ್ನಗಳನ್ನು ಲೋಡೀಂಗ್ ಮತ್ತು ಅನ್ಲೋಡಿಂಗ್ ಸೌಲಭ್ಯ ಇರುವ ಕ್ರೇನ್ ಮೂಲಕ ಡೆಲಿವರಿ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ಉದ್ಘಾಟನೆಯನ್ನು ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಭಾಗವಹಿಸಲಿರುವರು.

ಉದ್ದಿಮೆಯ ವಿಶೇಷತೆಗಳು:
ಕಾಂಕ್ರೀಟ್ ಸಾಲಿಡ್ ಬ್ಲಾಕುಗಳನ್ನು ಮೊದಲನೇ ಮಹಡಿಗೆ ಲಾರಿಯಿಂದ ನೇರವಾಗಿ ಸ್ವಯಂಚಾಲಿತ ಯಂತ್ರದ ಮೂಲಕ ಇಡುವುದು.ಅತ್ಯಾಧುನಿಕ ರೀತಿಯಲ್ಲಿ ತಯಾರಿಸಿ ಕ್ಯೂರಿಂಗ್ ಮಾಡಲಾದ ಕಂಪೌಂಡ್ ವಾಲ್ಗಳನ್ನು ಅಳವಡಿಸಿಕೊಡುವುದು.ವೈಜ್ಞಾನಿಕ ರೀತಿಯಲ್ಲಿ ಕಾಳುಮೆಣಸು ಬೆಳೆಯಲು ಕಾಂಕ್ರೀಟ್ ಕಂಬಗಳನ್ನು ಅಳವಡಿಸಿಕೊಡುವುದು.ಬೇಲಿ ಕಂಬಗಳು, “ವೈ” ಕಂಬಗಳು, ಟಾಯ್ಲೆಟ್ ಪಿಟ್‌ಗಳು, ಲಿಂಟಲ್‌ಗಳು, ವಾಸ್ತು ರೀತಿಯಲ್ಲಿ ತುಳಸಿಕಟ್ಟೆ ಮತ್ತು ಇತರೇ ಕಾಂಕ್ರೀಟ್ ಉತ್ಪನ್ನಗಳನ್ನು ತಯಾರಿಸಿ ಕೊಡುವುದು.

Related posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆ

Suddi Udaya

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪೆರಾಡಿ ಸಿಎ ಬ್ಯಾಂಕಿಗೆ ಸತತ 14 ವರ್ಷಗಳಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!