September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

ಬೆಳ್ತಂಗಡಿ: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ, ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವನ ಮೇಲೆ ಹಲ್ಲೆ ನಡೆದಿರುವ ಘಟನೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ ನಡೆದಿದೆ.

ಆದಿಲ್ ಹುಸೈನ್ ಏ.22 ರಂದು ಸಂಜೆ, ಕಾಲೇಜಿನಿಂದ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಎಂಬವರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿರುವಾಗ, ಪಿರ್ಯಾದಿದಾರರ ಪರಿಚಯದ ಆರೋಪಿಗಳಾದ ಬಿಕೆ ಮೊಯಿನುದ್ದೀನ್, ಮೋಹದ್ ಹಾಗೂ ಇತರ 5 ಜನ ಬಂದು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿರುತ್ತಾರೆ.

ಆಗ ಪಿರ್ಯಾದಿದಾರರ ಜೊತೆಯಲ್ಲಿದ್ದ ಸ್ನೇಹಿತರು ಹಲ್ಲೆಯ ಬಗ್ಗೆ ಪ್ರಶ್ನಿಸಿದಾಗ ಅವರಿಗೂ ಅರೋಪಿಗಳು ಬೆದರಿಕೆ ಒಡ್ಡಿದ್ದು, ಅಲ್ಲಿದ್ದ ಸಾರ್ವಜನಿಕರು ಗಲಾಟೆಯನ್ನು ಬಿಡಿಸಲು ಬಂದಾಗ ಆರೋಪಿಗಳು ಪಿರ್ಯಾದಿದಾರರಿಗೆ ಅವ್ಯಾಚವಾಗಿ ಬೈದು, ಜೀವಬೆದರಿಕೆ ಒಡ್ಡಿ ಸ್ಥಳದಿಂದ ತೆರಳಿರುತ್ತಾರೆ. ಹಲ್ಲೆಯಿಂದಾದ ಗಾಯಕ್ಕೆ ಪಿರ್ಯಾದಿರವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಕೆಲವು ತಿಂಗಳ ಹಿಂದೆ ಪಿರ್ಯಾದಿದಾರರ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ಮತ್ತು ಇತರರು ಹೊಡೆಯುತ್ತಿರುವಾಗ ಗಲಾಟೆಯನ್ನು ಪಿರ್ಯಾದಿದಾರರು ಬಿಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳು ತನ್ನ ಮೆಲೆ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 49/2026, ಕಲಂ: 189(2), 191(2), 191(3), 352,115(2), 118(1),351(2), ಜೊತೆಗೆ 190 ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಉಜಿರೆ ಬೃಹತ್ ಹಿಂದೂ ಸಂಗಮ ಆಯೋಜನಾ ಸಮಿತಿ ರಚನೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya

ಶಿರ್ಲಾಲು ಹಾ.ಉ.ಸ‌.ಸಂಘದ ಸದಸ್ಯ ರಾಧಾಕೃಷ್ಣ ಪಾರೋಟ್ಟುರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗರು ಶ್ರೀ ಬ್ರಹ್ಮಾನಂದ
ಸರಸ್ವತಿ ಸ್ವಾಮೀಜಿಯವರಿಂದ ಸುದ್ದಿ ಉದಯ ವಾರಪತ್ರಿಕೆ ಬಿಡುಗಡೆ

Suddi Udaya

ಮಹಿಳಾ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡು, ಕ್ಷೇತ್ರ‌ ಪುನರ್ ವಿಂಗಡನೆ ಮೂಲಕ ಅಧಿಕಾರ ಹಿಡಿಯಲು ಯತ್ನಿಸಿದ ಬಿಜೆಪಿಗೆ ಮುಖಭಂಗ- ರಕ್ಷಿತ್ ಶಿವರಾಂ

Suddi Udaya

ವೇಣೂರು: ಬಜಿರೆ ಬತ್ತಾರುನಲ್ಲಿ ‘ಹಿಂದೂ ರಾಷ್ಟ್ರ ಜಾಗೃತಿ ಸಭೆ’ ಸಂಪನ್ನ

Suddi Udaya
error: Content is protected !!