July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

ಬೆಳ್ತಂಗಡಿ: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ, ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವನ ಮೇಲೆ ಹಲ್ಲೆ ನಡೆದಿರುವ ಘಟನೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ ನಡೆದಿದೆ.

ಆದಿಲ್ ಹುಸೈನ್ ಏ.22 ರಂದು ಸಂಜೆ, ಕಾಲೇಜಿನಿಂದ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಎಂಬವರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿರುವಾಗ, ಪಿರ್ಯಾದಿದಾರರ ಪರಿಚಯದ ಆರೋಪಿಗಳಾದ ಬಿಕೆ ಮೊಯಿನುದ್ದೀನ್, ಮೋಹದ್ ಹಾಗೂ ಇತರ 5 ಜನ ಬಂದು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿರುತ್ತಾರೆ.

ಆಗ ಪಿರ್ಯಾದಿದಾರರ ಜೊತೆಯಲ್ಲಿದ್ದ ಸ್ನೇಹಿತರು ಹಲ್ಲೆಯ ಬಗ್ಗೆ ಪ್ರಶ್ನಿಸಿದಾಗ ಅವರಿಗೂ ಅರೋಪಿಗಳು ಬೆದರಿಕೆ ಒಡ್ಡಿದ್ದು, ಅಲ್ಲಿದ್ದ ಸಾರ್ವಜನಿಕರು ಗಲಾಟೆಯನ್ನು ಬಿಡಿಸಲು ಬಂದಾಗ ಆರೋಪಿಗಳು ಪಿರ್ಯಾದಿದಾರರಿಗೆ ಅವ್ಯಾಚವಾಗಿ ಬೈದು, ಜೀವಬೆದರಿಕೆ ಒಡ್ಡಿ ಸ್ಥಳದಿಂದ ತೆರಳಿರುತ್ತಾರೆ. ಹಲ್ಲೆಯಿಂದಾದ ಗಾಯಕ್ಕೆ ಪಿರ್ಯಾದಿರವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಕೆಲವು ತಿಂಗಳ ಹಿಂದೆ ಪಿರ್ಯಾದಿದಾರರ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ಮತ್ತು ಇತರರು ಹೊಡೆಯುತ್ತಿರುವಾಗ ಗಲಾಟೆಯನ್ನು ಪಿರ್ಯಾದಿದಾರರು ಬಿಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳು ತನ್ನ ಮೆಲೆ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 49/2026, ಕಲಂ: 189(2), 191(2), 191(3), 352,115(2), 118(1),351(2), ಜೊತೆಗೆ 190 ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya

ನಿವೃತ್ತರಾದ ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲಾ ಮುಖ್ಯಶಿಕ್ಷಕಿ ಸಿ| ಮೋಂತಿ ಡಿ’ಸೋಜಾ ರವರ ವಿದಾಯ ಸಮಾರಂಭ

Suddi Udaya

ಸ್ವಾಮಿ ಶ್ರೀ ವಿವೇಕಾನಂದ ಸೇವಾಶ್ರಮ ಟ್ರಸ್ಟ್ ಕಳೆಂಜದ ನಂದಗೋಕುಲ ಗೋಶಾಲೆಯ ವತಿಯಿಂದ ಅಂಬೇಡ್ಕರ್ ಜಯಂತಿ ಮತ್ತು ವಿಶು ಹಬ್ಬ ಆಚರಣೆ

Suddi Udaya

ಸಮಾಜ ಕಾರ್ಯ ವಿಭಾಗದಿಂದ ಆರ್ಥಿಕ ಶಿಸ್ತು ಕುರಿತು ಸಂವಾದ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಬಿ.ಎಡ್. ಹಾಗೂ ಡಿ.ಎಡ್. ಕಾಲೇಜು ಹಿರಿಯ ವಿದ್ಯಾರ್ಥಿಗಳ ಪುನರ್ ಸಮ್ಮಿಲನ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ತುಳು ಗುಡಿಗಾರ ಸಂಘ ದಕ್ಷಿಣ ಕನ್ನಡ ಮತ್ತು ಉಡುಪಿ ಇದರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!