ಪದ್ಮುಂಜ: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಎ.23 ರಂದು ಗುರುವಾರ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ಕ್ಷೇತ್ರದಲ್ಲಿ ದೃಢಕಲಶ, ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ, ಬ್ರಹ್ಮಕಲಶದ ಯಶಸ್ಸಿಗೆ ಕಾರಣಕರ್ತರಾದ ಸ್ವಯಂಸೇವಕರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಅನುವಂಶೀಯ ಮೊಕ್ತೇಸರರಾದ ಚಿದಾನಂದ್ ರಾವ್ ಕೊಲ್ಲಾಜೆ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾಂಟ ಮೋಗೆರೋಡಿ, ಕಾರ್ಯದರ್ಶಿ ಜಿತೇಶ್ ಜೈನ್ ಅಡೆಂಜ, ಕೋಶಾಧಿಕಾರಿ ರಕ್ಷಿತ್ ಶೆಟ್ಟಿ ಪಣೆಕ್ಕರ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್, ಬ್ರಹ್ಮಕಲಶೋತ್ಸವ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಲ್ಲೊಟ್ಟು, ಕಾರ್ಯಧ್ಯಕ್ಷ ನಾರಾಯಣ ಗೌಡ ಮುಚ್ಚೂರು, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಮಲೆಂಗಲ್ಲು, ಕೋಶಾಧಿಕಾರಿ ಉದಯ ಕುಮಾರ್ ಮೇಲಾಂಟ ಮೊಗರೋಡಿ, ಸಹಿತ ಮೊದಲಾದವರು ಉಪಸ್ಥಿತರಿದ್ದರು. ನವೀನ್ ಕೆ.ಪಿ. ಮತ್ತು ಶೋಭಾ ಪಿ.ಎಸ್. ಕಾರ್ಯಕ್ರಮ ನಿರೂಪಿಸಿದರು.












