24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

ಬೆಳ್ತಂಗಡಿ: ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದಡಿ ಬರುವ ಸಾಂಸ್ಕೃತಿಕ ಸಂಪನ್ಮೂಲಗಳು ಮತ್ತು ತರಬೇತಿ ಕೇಂದ್ರ (ಸಿಸಿಆರ್‌ಟಿ) ನೀಡುವ ೨೦೨೫-೨೬ನೇ ಸಾಲಿನ ರಾಷ್ಟ್ರಮಟ್ಟದ ಸಾಂಸ್ಕೃತಿಕ ಪ್ರತಿಭಾ ಶೋಧ ವಿದ್ಯಾರ್ಥಿವೇತನ (ಸಿಟಿಎಸ್‌ಎಸ್)ಕ್ಕೆ ಬೆಳ್ತಂಗಡಿ ಅಂಡಿಂಜೆ ನಿವಾಸಿ, ಶಿವಮೊಗ್ಗದ ಗೀತ ನೃತ್ಯ ಕಲಾ ಕುಟೀರದ ವಿದ್ಯಾರ್ಥಿನಿ ಸಾನ್ವಿ ಸಾಲಿಯಾನ್ ಆಯ್ಕೆಯಾಗಿದ್ದಾರೆ.

ಈ ವರ್ಷ ಆಯ್ಕೆಯಾದ 634 ವಿದ್ಯಾರ್ಥಿಗಳಲ್ಲಿ ಸಾನ್ವಿ ಸಾಲಿಯಾನ್ ಒಬ್ಬಳಾಗಿದ್ದು, ಭರತನಾಟ್ಯದಲ್ಲಿ ವಿಶೇಷ ತರಬೇತಿಗೆ ಈ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಶಿವಮೊಗ್ಗದ ಪೊದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಇವರು ಪ್ರಸ್ತುತ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾಗಿರುವ ಅಂಡಿಂಜೆ ‘ವನಸಿರಿ’ಯ ಡಾ. ಸತೀಶ್ ಕುಮಾರ್ ಅಂಡಿಂಜೆ ಮತ್ತು ವಿನಯಾ ದಂಪತಿ ಪುತ್ರಿ.

Related posts

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮುಡಿಪು ಜವಾಹರ್ ನವೋದಯ ಶಾಲೆಗೆ ಎಸ್.ಡಿ.ಎಂ ಶಾಲೆಯ ವಿದ್ಯಾರ್ಥಿ ಕು| ಯತಿಕ್ ಕೆ. ಎಸ್ ಆಯ್ಕೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!