22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

ಉಜಿರೆ: ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ, ಶ್ರೀ ಗುರುನಾರಾಯಣ ಸೇವಾ ಸಂಘ ಉಜಿರೆ ಇದರ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ,ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ ಹಾಗೂ ಶ್ರೀ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ಏ.24ರಂದು ಜರುಗಲಿದೆ ಎಂದು ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಉಜಿರೆ ಇದರ ಅಧ್ಯಕ್ಷ ರವಿಕುಮಾರ್ ಬರಮೇಲು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏ.23ರಂದು ಸಂಜೆ ತಂತ್ರಿವರ್ಯರು ಶ್ರೀ ಕೃಷ್ಣ ಗುರೂಜಿ ಧರ್ಮದರ್ಶಿಗಳು ಶ್ರೀ ಕಾಳಿಕಾಂಬ ಆಂಜನೇಯ ದೇವಸ್ಥಾನ ಮಾಣಿಲ ಕುಕ್ಕಾಜೆ ಇವರ ಆಗಮನ ಪೂರ್ಣ ಕುಂಭ ಸ್ಚಾಗತ, ಆಚಾರ್ಯವರಣ ಸಾಮೂಹಿಕ ಪ್ರಾರ್ಥನೆ, ಪ್ರಸಾದ ಪರಿಗ್ರಹ, ಪ್ರಸಾದ ಶುಧಿ, ವಾಸ್ತು ಹೋಮ, ರಾಕ್ಷೋಘ್ನ ಹೋಮ, ವಾಸ್ತು ಬಲಿ, ರಾತ್ರಿ ಅನ್ನಸಂತರ್ಪಣೆ ನಡೆಯುವುದು.

ಏ.24ರಂದು ಬೆಳಿಗ್ಗೆ ಗಣಪತಿ ಹೋಮ, ಶ್ರೀ ಗುರುನಾರಾಯಣ ಸ್ವಾಮಿಯ ಪೀಠ ಪ್ರತಿಷ್ಠೆ, ಕಲಶಾಭಿಷೇಕ ಶ್ರಿ ನಾರಾಯಣ ಗುರುಗಳ ಛಾಯಚಿತ್ರ ಪ್ರತಿಷ್ಠೆ ಹಾಗೂ ಗುರುಮಂದಿರ ಉದ್ಘಾಟನೆ, ಗುರುಪೂಜೆ, ಸತ್ಯನಾರಾಯಣ ಪೂಜೆ, ವಿವಿಧ ತಂಡಗಳಿಂದ ಭಜನೆನ ಮಧ್ಯಾಹ್ನ ಅನ್ನಸಂತರ್ಪಣೆ ಜರಗುವುದು.

Related posts

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳದ ಪೂರ್ವಭಾವಿ ಸಭೆ

Suddi Udaya

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾಲ್ಕೂರು: ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ತೋಟದಲ್ಲಿ ಮೆಯುತ್ತಿದ್ದ ಹಸುವಿಗೆ ವಿದ್ಯುತ್ ತಗುಲಿ ಸಾವು

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

Suddi Udaya
error: Content is protected !!