24 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಏ.26: ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಶುಭಾರಂಭ

ಅಳದಂಗಡಿ: ಇಲ್ಲಿಯ ಶ್ರೀ ಗೌರೀಶ್ವರ ಆವರಣದಲ್ಲಿ “ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್‌ಗಳು, ಕಂಪೌಂಡ್ ವಾಲ್‌ಗಳು,ಕಾಂಕ್ರೀಟ್ ಕಂಬಗಳು, ಮತ್ತು ಇತರ ಕಾಂಕ್ರೀಟ್ ಉತ್ಪನ್ನಗಳ ತಯಾರಿಕಾ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಏ.26ರಂದು ಜರುಗಲಿದೆ ಎಂದು ಸಂಸ್ಥೆಯ ಪಾಲುದಾರರಾದ ಅವನೀಶ ಕಟ್ಟೂರು, ಬಿ.ಇ. ಮತ್ತು ಅನುರುದ್ಧ ಕಟ್ಟೂರು, ಬಿ.ಇ.(ಸಿವಿಲ್) ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಕಾಂಕ್ರೀಟ್ ಸಾಲಿಡ್ ಬ್ಲಾಕ್ಸ್ 4″, 6″, 8″,ಕಾಂಕ್ರೀಟ್ ಕಂಪೌಂಡ್ ವಾಲ್,ಕಾಳುಮೆಣಸು ಕಂಬ,ಬೇಲಿ ಕಂಬ ಮತ್ತು ಇತರ ಕಾಂಕ್ರೀಟ್ ಉತ್ಪನ್ನಗಳನ್ನು ಲೋಡೀಂಗ್ ಮತ್ತು ಅನ್ಲೋಡಿಂಗ್ ಸೌಲಭ್ಯ ಇರುವ ಕ್ರೇನ್ ಮೂಲಕ ಡೆಲಿವರಿ ಮಾಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

ಉಜಿರೆ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡುವೆಟ್ನಾಯ ಉದ್ಘಾಟನೆಯನ್ನು ನೆರವೇರಿಸಲಿರುವರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೂಡಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ಭಾಗವಹಿಸಲಿರುವರು.

ಉದ್ದಿಮೆಯ ವಿಶೇಷತೆಗಳು:
ಕಾಂಕ್ರೀಟ್ ಸಾಲಿಡ್ ಬ್ಲಾಕುಗಳನ್ನು ಮೊದಲನೇ ಮಹಡಿಗೆ ಲಾರಿಯಿಂದ ನೇರವಾಗಿ ಸ್ವಯಂಚಾಲಿತ ಯಂತ್ರದ ಮೂಲಕ ಇಡುವುದು.ಅತ್ಯಾಧುನಿಕ ರೀತಿಯಲ್ಲಿ ತಯಾರಿಸಿ ಕ್ಯೂರಿಂಗ್ ಮಾಡಲಾದ ಕಂಪೌಂಡ್ ವಾಲ್ಗಳನ್ನು ಅಳವಡಿಸಿಕೊಡುವುದು.ವೈಜ್ಞಾನಿಕ ರೀತಿಯಲ್ಲಿ ಕಾಳುಮೆಣಸು ಬೆಳೆಯಲು ಕಾಂಕ್ರೀಟ್ ಕಂಬಗಳನ್ನು ಅಳವಡಿಸಿಕೊಡುವುದು.ಬೇಲಿ ಕಂಬಗಳು, “ವೈ” ಕಂಬಗಳು, ಟಾಯ್ಲೆಟ್ ಪಿಟ್‌ಗಳು, ಲಿಂಟಲ್‌ಗಳು, ವಾಸ್ತು ರೀತಿಯಲ್ಲಿ ತುಳಸಿಕಟ್ಟೆ ಮತ್ತು ಇತರೇ ಕಾಂಕ್ರೀಟ್ ಉತ್ಪನ್ನಗಳನ್ನು ತಯಾರಿಸಿ ಕೊಡುವುದು.

Related posts

ಬೆಳ್ತಂಗಡಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ವೈಜಣ್ಣರವರಿಂದ ಕಲ್ಮಂಜ ರಮೇಶ್ ನಾಯ್ಕ ರವರ ಅಡಿಕೆ ತೋಟ ರಚನೆಯ ಪರಿಶೀಲನೆ

Suddi Udaya

ಅಖಿಲ ಭಾರತ ಸಿವಿಲ್ ಇಂಜಿನಿಯರ್ಸ್ ಅಸೋಸಿಯೇಷನ್ ನ ಬೆಳ್ತಂಗಡಿ ಸೆಂಟರ್ ಗೆ ರಾಷ್ಟ್ರ ಮಟ್ಟದ ಮೋಸ್ಟ್ ಗ್ರೋವಿಂಗ್ ಸೆಂಟರ್ ರನ್ನರ್ ಅಪ್ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ ಆಚರಣೆ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿಯ ಮಾಸಿಕ ಸಭೆ

Suddi Udaya

ಉಜಿರೆಯಲ್ಲಿ ಲೋಕಕಲ್ಯಾಣಾರ್ಥ “ಶ್ರೀ ವಿಷ್ಣು ಯಾಗ”   

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!