September 17, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಡ ರಾತ್ರಿ ಹಂಚು ತೆಗೆದು ದೇಗುಲದೊಳಗೆ ನುಗ್ಗಿ ದಾಂಧಲೆ

ಬಳಂಜ: ತಡರಾತ್ರಿ ಕಿಡಿಗೇಡಿಯೊಬ್ಬ ಏಕಾಎಕಿ ದಾಂಧಲೆ ಎಬ್ಬಿಸಿ, ಇತಿಹಾಸ ಪ್ರಸಿದ್ದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಕ್ಕೆ ನುಗ್ಗಿ ದೇವರ ಮೂರ್ತಿಯನ್ನು ಭಗ್ನಗೊಳಿಸಿದ ಘಟನೆ ಎ.22ರಂದು ತಡರಾತ್ರಿ ನಡೆದಿದೆ.

ಘಟನೆ ವಿವರ: ಕಳೆದ ರಾತ್ರಿ ಸಮಯ ಎರಡು ಗಂಟೆಗೆ ಕಪ್ಪು ಕಲರಿನ ಥಾರ್ ವಾಹನದಲ್ಲಿ ದೇವಸ್ಥಾನದ ಪಕ್ಕದಲ್ಲಿರುವ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ಬಂದ ಅಜೇಯ್ ಎಂಬ ಕೀಡಿಗೇಡಿ “ಎನನ್ ಬಚಾವ್ ಮಲ್ಪಿ” ಎಂದು ಜೋರಾಗಿ ಕೂಗಾಡಿ ಮನೆಗೆ ನುಗ್ಗಲು ಯತ್ನಿಸಿದಾಗ ಮನೆಯರು ಜೋರು ಮಾಡಿದ ವಿಚಾರ ಬೆಳಕಿಗೆ ಬಂದಿದೆ.

ಬಳಿಕ ಕೀಡಿಗೇಡಿ ಬಳಂಜ ದೇವಸ್ಥಾನದ ಪವಿತ್ರವಾದ ದೇವರ ಜಲಕದ ಕೆರೆಗೆ ಹಾರಿ ಅಲ್ಲಿಂದ ಸೀದಾ ದೇವಸ್ಥಾನಕ್ಕೆ ಬಂದು ಕಂಬದ ಮೂಲಕ ದೇವಸ್ಥಾನದ ಮೇಲೆ ಹೋಗಿ ಹಂಚು ತೆಗೆದು ಒಳನುಗ್ಗಿ ಕೊಡಮಣಿತ್ತಾಯ ದೈವದ ಗುಡಿಗೆ ಇಳಿದು ದೈವದ ಮಣೆ ಮಂಚದಲ್ಲಿದ್ದ ಘಂಟಾಮಣಿಯನ್ನು ತೆಗೆದು ದೇವಸ್ಥಾನ ಮೇಲ್ಚಾವಣಿಯಲ್ಲಿ ಹಂಚುಗಳ ಪಕ್ಕದಲ್ಲಿ ಇಟ್ಟು ವಿಕೃತಿ ಮೆರೆದಿದ್ದಾನೆ.

ಬಳಿಕ ದೇವಸ್ಥಾನ ತೀರ್ಥ ಮಂಟಪದ ಬಳಿಯಿರುವ ದೊಡ್ಡ ಘಂಟೆಯನ್ನು ಬಾರಿಸಿ, ಗೋಪಾಲಕೃಷ್ಣ ದೇವರ ಗುಡಿಯೊಳಗೆ ನುಗ್ಗಿ ದೇವರ ವಿಗ್ರಹವನ್ನು ತೆಗೆದು ನೆಲಕ್ಕೆ ಎಸೆದು ಭಗ್ನಗೊಳಿಸಿದ್ದಾನೆ. ಗುಡಿಯೊಳಗಿದ್ದ ದೇವರ ಪರಿಕರಗಳನ್ನು ಚೆಲ್ಲಾಪಿಲ್ಲಿಗೊಳಿಸಿ ವಿಕೃತಿ ಮರೆದಿದ್ದಾನೆ.

ಈ ಘಟನೆಯ ಬಗ್ಗೆ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಬಿ.ಶೀತಲ್ ಪಡಿವಾಳ್ ಅವರು ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆಯಿಂದ ಸ್ಥಳೀಯರ ದೇವಸ್ಥಾನದ ಭಕ್ತ ವರ್ಗದಲ್ಲಿ ದಿಗ್ಭ್ರಮೆ ಮೂಡಿಸಿದ್ದು ಈ ಘಟನೆಯಿಂದ ಆತಂಕ ಕೂಡ ನಿರ್ಮಾಣವಾಗಿದೆ.

ಪೋಲಿಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ತನಿಖೆ ನಡೆಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಿಡಿಗೇಡಿಯ ಈ ಕೃತ್ಯಕ್ಕೆ ಕಾರಣವೇನು ಎಂಬುದು ನಿಗೂಢವಾಗಿದೆ.ಇತ್ತಿಚೀನ ದಿನಗಳಲ್ಲಿ ರಾತ್ರಿ ತಿರುಗುವ ವಾಹನ, ಗಾಂಜಾ, ಡ್ರಗ್ಸ್ ಬಗ್ಗೆ ಗಾಳಿ ಸುದ್ದಿಯಿದ್ದು ಇದರ ಬಗ್ಗೆಯೂ ತನಿಖೆ ಆಗಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಕೀಡಿಗೇಡಿಯ ಕಪ್ಪು ಬಣ್ಣದ ಥಾರ್ ವಾಹನ ಸುಬ್ರಹ್ಮಣ್ಯ ಭಟ್ ಅವರ ಮನೆಯಂಗಳದಲ್ಲಿದೆ.

Related posts

ಸೋಣಂದೂರು: ಜಿಲ್ಲಾ ಮಟ್ಟದ ಪುರುಷರ 55 ಕೆಜಿ ವಿಭಾಗದ ಕಬಡ್ಡಿ ಪಂದ್ಯಾಟ

Suddi Udaya

ನೂರುಲ್ ಹುದಾ ಮದ್ರಸ ಕನ್ನಡಿಕಟ್ಟೆಯಲ್ಲಿ ವೈಭವದ ‘ಫೈಳಾನ್ 2026 ಮೀಲಾದ್ ಫೆಸ್ಟ್”: ಟೈಗ್ರಿಸ್ ತಂಡ ಚಾಂಪಿಯನ್

Suddi Udaya

ಕಳೆಂಜ: ನಡುಜಾರು ಸ.ಕಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ನೆರಿಯ ಪೆಟ್ರೋನೆಟ್ ವತಿಯಿಂದ ಸ್ಕೂಲ್ ಬ್ಯಾಗ್ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಮದ್ದಡ್ಕ ತಾಯಿ ರಕ್ತೇಶ್ವರಿ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ರೂ.1 ಲಕ್ಷ ದೇಣಿಗೆ

Suddi Udaya
error: Content is protected !!