July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

ಬೆಳ್ತಂಗಡಿ: ಪುತ್ತೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ, ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಎಂಬವನ ಮೇಲೆ ಹಲ್ಲೆ ನಡೆದಿರುವ ಘಟನೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿಸಿ ಬಸ್ಸು ನಿಲ್ದಾಣದ ಬಳಿ ನಡೆದಿದೆ.

ಆದಿಲ್ ಹುಸೈನ್ ಏ.22 ರಂದು ಸಂಜೆ, ಕಾಲೇಜಿನಿಂದ ತನ್ನ ಸ್ನೇಹಿತರಾದ ಸುಹೇಲ್ ಮತ್ತು ಅಝಾರ್ ಎಂಬವರೊಂದಿಗೆ ಪುತ್ತೂರು ಕಸಬಾ ಗ್ರಾಮದ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿರುವಾಗ, ಪಿರ್ಯಾದಿದಾರರ ಪರಿಚಯದ ಆರೋಪಿಗಳಾದ ಬಿಕೆ ಮೊಯಿನುದ್ದೀನ್, ಮೋಹದ್ ಹಾಗೂ ಇತರ 5 ಜನ ಬಂದು ಪಿರ್ಯಾದಿದಾರರಿಗೆ ಹಲ್ಲೆ ನಡೆಸಿರುತ್ತಾರೆ.

ಆಗ ಪಿರ್ಯಾದಿದಾರರ ಜೊತೆಯಲ್ಲಿದ್ದ ಸ್ನೇಹಿತರು ಹಲ್ಲೆಯ ಬಗ್ಗೆ ಪ್ರಶ್ನಿಸಿದಾಗ ಅವರಿಗೂ ಅರೋಪಿಗಳು ಬೆದರಿಕೆ ಒಡ್ಡಿದ್ದು, ಅಲ್ಲಿದ್ದ ಸಾರ್ವಜನಿಕರು ಗಲಾಟೆಯನ್ನು ಬಿಡಿಸಲು ಬಂದಾಗ ಆರೋಪಿಗಳು ಪಿರ್ಯಾದಿದಾರರಿಗೆ ಅವ್ಯಾಚವಾಗಿ ಬೈದು, ಜೀವಬೆದರಿಕೆ ಒಡ್ಡಿ ಸ್ಥಳದಿಂದ ತೆರಳಿರುತ್ತಾರೆ. ಹಲ್ಲೆಯಿಂದಾದ ಗಾಯಕ್ಕೆ ಪಿರ್ಯಾದಿರವರು ಪುತ್ತೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿರುತ್ತಾರೆ.

ಕೆಲವು ತಿಂಗಳ ಹಿಂದೆ ಪಿರ್ಯಾದಿದಾರರ ಕಾಲೇಜಿನ ವಿದ್ಯಾರ್ಥಿಗಳಿಗೆ ಆರೋಪಿ ಮೊಯಿನುದ್ದೀನ್ ಮತ್ತು ಇತರರು ಹೊಡೆಯುತ್ತಿರುವಾಗ ಗಲಾಟೆಯನ್ನು ಪಿರ್ಯಾದಿದಾರರು ಬಿಡಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಆರೋಪಿಗಳು ತನ್ನ ಮೆಲೆ ಹಲ್ಲೆ ನಡೆಸಿರುತ್ತಾರೆ ಎಂಬುದಾಗಿ ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ : 49/2026, ಕಲಂ: 189(2), 191(2), 191(3), 352,115(2), 118(1),351(2), ಜೊತೆಗೆ 190 ಬಿ ಎನ್ ಎಸ್ 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಎಸ್‌ಡಿಎಂ ಕಾಲೇಜಿನಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಭಾಟನೆ

Suddi Udaya

ಉದ್ಯೋಗದ ಪ್ರಥಮ ವೇತನ ಬಾರ್ಯ ಶ್ರೀ ಮಹಾವಿಷ್ಣು ಕ್ಷೇತ್ರಕ್ಕೆ ಸಮರ್ಪಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮಂಗಳೂರು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಿದ್ದ ಮೇಲ್ಮನವಿ ವಜಾ

Suddi Udaya
error: Content is protected !!