24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

ಬೆಳ್ತಂಗಡಿ: ಭಾರತ ಸರಕಾರದ ಸಂಸ್ಕೃತಿ ಸಚಿವಾಲಯದಡಿ ಬರುವ ಸಾಂಸ್ಕೃತಿಕ ಸಂಪನ್ಮೂಲಗಳು ಮತ್ತು ತರಬೇತಿ ಕೇಂದ್ರ (ಸಿಸಿಆರ್‌ಟಿ) ನೀಡುವ ೨೦೨೫-೨೬ನೇ ಸಾಲಿನ ರಾಷ್ಟ್ರಮಟ್ಟದ ಸಾಂಸ್ಕೃತಿಕ ಪ್ರತಿಭಾ ಶೋಧ ವಿದ್ಯಾರ್ಥಿವೇತನ (ಸಿಟಿಎಸ್‌ಎಸ್)ಕ್ಕೆ ಬೆಳ್ತಂಗಡಿ ಅಂಡಿಂಜೆ ನಿವಾಸಿ, ಶಿವಮೊಗ್ಗದ ಗೀತ ನೃತ್ಯ ಕಲಾ ಕುಟೀರದ ವಿದ್ಯಾರ್ಥಿನಿ ಸಾನ್ವಿ ಸಾಲಿಯಾನ್ ಆಯ್ಕೆಯಾಗಿದ್ದಾರೆ.

ಈ ವರ್ಷ ಆಯ್ಕೆಯಾದ 634 ವಿದ್ಯಾರ್ಥಿಗಳಲ್ಲಿ ಸಾನ್ವಿ ಸಾಲಿಯಾನ್ ಒಬ್ಬಳಾಗಿದ್ದು, ಭರತನಾಟ್ಯದಲ್ಲಿ ವಿಶೇಷ ತರಬೇತಿಗೆ ಈ ವಿದ್ಯಾರ್ಥಿವೇತನ ನೀಡಲಾಗುತ್ತದೆ. ಶಿವಮೊಗ್ಗದ ಪೊದಾರ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಓದುತ್ತಿರುವ ಇವರು ಪ್ರಸ್ತುತ ಶಿವಮೊಗ್ಗ ಕುವೆಂಪು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರಾಗಿರುವ ಅಂಡಿಂಜೆ ‘ವನಸಿರಿ’ಯ ಡಾ. ಸತೀಶ್ ಕುಮಾರ್ ಅಂಡಿಂಜೆ ಮತ್ತು ವಿನಯಾ ದಂಪತಿ ಪುತ್ರಿ.

Related posts

ರಾಜ್ಯಮಟ್ಟದ ಜಿನ ಭಜನಾ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಗೇರುಕಟ್ಟೆ ಮೆದಿನದಲ್ಲಿ ‘ಸುಧನ್ವ ಮೋಕ್ಷ’ ತಾಳಮದ್ದಳೆ

Suddi Udaya

ಸಾಮಾಜಿಕ ಜಾಲತಾಣಗಳ ಮುಖಾಂತರ ಸುಳ್ಳು ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಕಾಂಗ್ರೆಸ್ ಜಿಲ್ಲಾ ಸಾಮಾಜಿಕ ಜಾಲಾತಾಣ ವಿಭಾಗದ ಪ್ರಧಾನ ಕಾರ್ಯದರ್ಶಿ ಗಣೇಶ್ ರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

ಗರ್ಡಾಡಿ : ಹಳ್ಳಿಂಜ ಬೀಡು ನಿವಾಸಿ ಭವಾನಿ ನಿಧನ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಲಾಯಿಲದಲ್ಲಿ ಕೃಷಿ/ತೋಟಗಾರಿಕೆ ಯಂತ್ರೋಪಕರಣಗಳ ಮಾರಾಟ ಹಾಗೂ ಸರ್ವೀಸ್ ಸೆಂಟರ್ ಮಳಿಗೆ ಉದ್ಘಾಟನೆ

Suddi Udaya
error: Content is protected !!