ಹಳೆಕೋಟೆ ಶ್ರೀ ಮಾರಿಯಮ್ಮ ದೇವಸ್ಥಾನ ಬೋಳಾರ, ಮಂಗಳೂರು ಮತ್ತು ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿದ ಬೇಸಿಗೆ ಶಿಬಿರದಲ್ಲಿ ವಿದ್ಯಾರ್ಥಿಗಳಿಗೆ ಶ್ರೀ ಮಹಾಭಾರತ ಲಿಖಿತ ರಸಪ್ರಶ್ನೆಯನ್ನು ನಡೆಸಲಾಯಿತು.
ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಕಲಾ ಟ್ರಸ್ಟ್ ಸುವರ್ಣ ಮಹೋತ್ಸವದ ಅಂಗವಾಗಿ ಮಹಾಭಾರತ ಸರಣಿಯ ಈ ಕಾರ್ಯಕ್ರಮವನ್ನು ಟ್ರಸ್ಟ್ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ನಡೆಸಿಕೊಟ್ಟರು.
ಟ್ರಸ್ಟ್ ಸದಸ್ಯ ಶ್ರೀಧರ ಎಸ್ ಪಿ ಕೃಷ್ಣಾಪುರ, ಶಿಬಿರದ ಸಂಯೋಜಕರಾದ ಶ್ರೀ ಪತಂಜಲಿ ಯೋಗ ಶಿಕ್ಷಣ ಪ್ರತಿಷ್ಠಾನದ ಸದಸ್ಯರು,ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯ ಶ್ರೀ ಸುಭಾಶ್ಚಂದ್ರ ಕಾಂಚನ್, ಕಾರ್ಯ ನಿರ್ವಹಣಾಧಿಕಾರಿ ಸಹಕರಿಸಿದರು.
5ರಿಂದ 10ನೇ ತರಗತಿ ವರೆಗಿನ 23 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಜೇತರಾದ ಹಿರಿಯ ಮತ್ತು ಕಿರಿಯ ವಿಭಾಗದ ವಿದ್ಯಾರ್ಥಿಗಳಿಗೆಬಹುಮಾನಗಳನ್ನು ವಿತರಿಸಲಾಯಿತು.













