25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಉಜಿರೆ: ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ

ಉಜಿರೆ: ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಶಿವಗಿರಿ ಇಚ್ಚಿಲ ಉಜಿರೆ, ಶ್ರೀ ಗುರುನಾರಾಯಣ ಸೇವಾ ಸಂಘ ಉಜಿರೆ ಇದರ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ, ಕಲಶಾಭಿಷೇಕ, ಶ್ರೀ ನಾರಾಯಣ ಗುರುಮಂದಿರ ಲೋಕಾರ್ಪಣೆ ಹಾಗೂ ಶ್ರೀ ಗುರುಪೂಜೆ ಮತ್ತು ಶ್ರೀ ಸತ್ಯನಾರಾಯಣ ಪೂಜೆಯು ಎ.24ರಂದು ಜರುಗಿತು.

ಸಮಾರಂಭವನ್ನು ಉಜಿರೆ ಸಿವಿಲ್ ಎಂಜಿನಿಯರ್ ಸೂರ್ಯನಾರಾಯಣ ಕೆ. ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಉಜಿರೆ ಶ್ರೀ ಗುರುನಾರಾಯಣ ಮಂದಿರ ಸೇವಾ ಸಮಿತಿ ಅಧ್ಯಕ್ಷ ರವಿಕುಮಾರ್ ಬರಮೇಲು ವಹಿಸಿ ಪ್ರಸ್ತಾವನೆ ಗೈದರು.

ಮುಖ್ಯ ಅತಿಥಿಗಳಾಗಿ ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನಾದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ. ಕೆ. ಪ್ರಸಾದ್, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಶ್ರೀ ನಾರಾಯಣ ಗುರು ಮಂದಿರದ ಗೌರವಾಧ್ಯಕ್ಷ ಶ್ರೀಧರ ಪೂಜಾರಿ ಕಲಾಯಿ ಭಾಗವಹಿಸಿದ್ದರು. ಉಜಿರೆ ಶ್ರೀ ಗುರುನಾರಾಯಣ ಸೇವಾ ಸಂಘದ ಅಧ್ಯಕ್ಷ ಹರೀಶ್ ಬರಮೇಲು, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮಂಜುಳಾ ಉಮೇಶ್, ಶ್ರೀ ಗುರುನಾರಾಯಣ ಮಂದಿರದ ಸೇವಾ ಸಮಿತಿ ಕೋಶಾಧಿಕಾರಿ ಮಂದಿರದ ಸ್ಥಳ ದಾನಿ ಸಚ್ಚಿದಾನಂದ ಇಚ್ಚಿಲ, ಸಿವಿಲ್ ಎಂಜಿನಿಯರ್ ತಾರಾನಾಥ ಪೂಜಾರಿ ಗುರಿಪಳ್ಳ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಗುರು ಮಂದಿರದ ಸಂಚಾಲಕ ಮನೋಜ್ ಕುಂಜರ್ಪ ಸ್ವಾಗತಿಸಿ, ಗುರು ನಾರಾಯಣ ಸೇವಾ ಸಂಘದ ಕಾರ್ಯದರ್ಶಿ ಯುವರಾಜ್ ಮಣಿಕ್ಕೆ, ಶ್ವೇತಾ ಮಣಿಕ್ಕೆ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಗುರು ನಾರಾಯಣ ಮಂದಿರ ಸೇವಾ ಸಮಿತಿ, ಶ್ರೀ ಗುರುನಾರಾಯಣ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು, ಸ್ವಜಾತಿ ಭಾಂದವರು ಹಾಜರಿದ್ದು ಸಹಕರಿಸಿದರು. ಬೆಳಿಗ್ಗೆ ಗಣಪತಿ ಹೋಮ, ಶ್ರೀ ಗುರುನಾರಾಯಣ ಸ್ವಾಮಿಯ ಪೀಠ ಪ್ರತಿಷ್ಠೆ, ಕಲಶಾಭಿಷೇಕ ಶ್ರೀ ನಾರಾಯಣ ಗುರುಗಳ ಛಾಯಚಿತ್ರ ಪುತಿಷ್ಠೆ ಹಾಗೂ ಗುರುಮಂದಿರ ಉದ್ಘಾಟನೆ, ಗುರುಪೂಜೆ ಜರಗಿತು.

Related posts

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ 26ನೇ ವಾರ್ಷಿಕೋತ್ಸವ ಆಚರಣೆ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ‌ ಶಾಲೆಯ ಶಿಕ್ಷಕ – ರಕ್ಷಕ ಸಂಘದ ಸಭೆ

Suddi Udaya

ಮುಂಡಾಜೆ: ಹುರ್ತಾಜೆ ನಿವಾಸಿ ಸೀತಾ ಶೆಟ್ಟಿ ನಿಧನ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವದ ಸಮಿತಿ ರಚನೆ

Suddi Udaya
error: Content is protected !!