September 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಘ ಬೆಳ್ತಂಗಡಿ ಇದರ ರಜತ ಸಂಭ್ರಮ' ಹಾಗೂ ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ಎಂಬಲ್ಲಿ ಸಂಘದ ಸದಸ್ಯೆ ಅಚ್ಚಿನಡ್ಕ ಶ್ರೀಮತಿ ವೀರಮ್ಮನವರು ತನ್ನ ತಾಯಿಯ ಹೆಸರಿನಲ್ಲಿ ದಾನವಾಗಿ ನೀಡಿದ ಜಾಗದಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡಪ್ರಬುದ್ಧ’ ಇದರ ಉದ್ಘಾಟನೆ ಎ.25ರಂದು ನಡೆಯಿತು .

ನೂತನ ಕಟ್ಟಡವನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ವಹಿಸಿದ್ದರು.

ಎಂಎಲ್ಸಿಸಿ ಪ್ರತಾಪಸಿಂಹ ನಾಯಕ್ ಪ್ರಬುದ್ಧ-3 ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಎಕ್ಷೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ದಾನಿಗಳ ಫಲಕ ಅನಾವರಣ ಮಾಡಿದರು.

ಮುಖ್ಯ ಅಭ್ಯಾಗತರಾಗಿ ಕ.ರಾ.ಸ.ನೌ.ಸಂಘದ ಜಯರಾಜ್ ಜೈನ್, ಪುತ್ತೂರು ಸಂಘದ ಕಾರ್ಯದರ್ಶಿ ತಿರುಮಲೇಶ್ವರ ಭಟ್,‌ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಮಂಜುಶ್ರೀ ಸೀನಿಯರ್ ಛೇಂಬರ್ ಅಧ್ಯಕ್ಷ ಜೋನ್ ಅರ್ವಿನ್ ಡಿಸೋಜ, ಮಂಜುಶ್ರೀ ಜೇಸಿಸ್ ಅಧ್ಯಕ್ಷ ಜಿತೇಶ್, ಬೆಳ್ತಂಗಡಿ ಪತ್ರಕತ೯ರ ಸಂಘದ ಅಧ್ಯಕ್ಷ ತುಕಾರಾಂ, ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಉಮಾ ಆರ್. ರಾವ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಹಮ್ಮದ್ ರಫಿ, ಜಾಗದ ದಾನಿ ವೀರಮ್ಮ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಸ್ಥಳ ದಾನಿ ಹಾಗೂ ಆಥಿ೯ಕ ಸಹಕಾರ ನೀಡಿದ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಶ್ರೀಮತಿ ಗೀತಾ ರಮಾನಂದ ರಾವ್ ಪ್ರಾರ್ಥನೆ ಬಳಿಕ ಎಂ.ಎನ್ ಜೋಸೆಫ್ ಸ್ವಾಗತಿಸಿದರು. ಸಮನ್ವಯಕಾರ ವಸಂತ ಸುವರ್ಣ ಧನ್ಯವಾದ ವಿತ್ತರು.

Related posts

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ 25 ಸಾವಿರ ಸಹಾಯಧನ ವಿತರಣೆ

Suddi Udaya

ಕರಾಟೆ ಸ್ಪರ್ಧೆ : ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗೆ ಚಿನ್ನದ ಪದಕ

Suddi Udaya

ರಸ್ತೆ ಗುಂಡಿಗೆ ಬಿದ್ದು ಪ್ರಾಣಹಾನಿಯಾದರೆ ಇಂಜಿನಿಯರ್‌ಗಳೇ ಹೊಣೆ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಚಿವ ಯು.ಟಿ.ಖಾದರ್

Suddi Udaya

ನಡ ಸ.ಪ.ಪೂ. ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ ವಯೋನಿವೃತ್ತಿ ಹೊಂದಿದ ಚಂದ್ರಶೇಖರ್ ರವರಿಗೆ ಸಾರ್ವಜನಿಕ ಅಭಿನಂದನಾ ಕಾರ್ಯಕ್ರಮ

Suddi Udaya

ಬಾರ್ಯ : ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
error: Content is protected !!