23.9 C
ಪುತ್ತೂರು, ಬೆಳ್ತಂಗಡಿ
June 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ: ರೂ.40 ಲಕ್ಷ ವೆಚ್ಚದ ಪ್ರಬುದ್ಧ ನೂತನ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ರಾಜ್ಯ ಸರಕಾರಿ ನಿವೃತ್ತ ನೌಕರರ ಮತ್ತು ಹಿರಿಯ ನಾಗರಿಕರ ಸೇವಾ ಸಂಘ ಬೆಳ್ತಂಗಡಿ ಇದರ ರಜತ ಸಂಭ್ರಮ' ಹಾಗೂ ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ಎಂಬಲ್ಲಿ ಸಂಘದ ಸದಸ್ಯೆ ಅಚ್ಚಿನಡ್ಕ ಶ್ರೀಮತಿ ವೀರಮ್ಮನವರು ತನ್ನ ತಾಯಿಯ ಹೆಸರಿನಲ್ಲಿ ದಾನವಾಗಿ ನೀಡಿದ ಜಾಗದಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡಪ್ರಬುದ್ಧ’ ಇದರ ಉದ್ಘಾಟನೆ ಎ.25ರಂದು ನಡೆಯಿತು .

ನೂತನ ಕಟ್ಟಡವನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ವಿಠಲ ಶೆಟ್ಟಿ ವಹಿಸಿದ್ದರು.

ಎಂಎಲ್ಸಿಸಿ ಪ್ರತಾಪಸಿಂಹ ನಾಯಕ್ ಪ್ರಬುದ್ಧ-3 ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು. ಎಕ್ಷೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ದಾನಿಗಳ ಫಲಕ ಅನಾವರಣ ಮಾಡಿದರು.

ಮುಖ್ಯ ಅಭ್ಯಾಗತರಾಗಿ ಕ.ರಾ.ಸ.ನೌ.ಸಂಘದ ಜಯರಾಜ್ ಜೈನ್, ಪುತ್ತೂರು ಸಂಘದ ಕಾರ್ಯದರ್ಶಿ ತಿರುಮಲೇಶ್ವರ ಭಟ್,‌ ನಿವೃತ್ತ ಎಸ್.ಪಿ ಪೀತಾಂಬರ ಹೇರಾಜೆ, ಮಂಜುಶ್ರೀ ಸೀನಿಯರ್ ಛೇಂಬರ್ ಅಧ್ಯಕ್ಷ ಜೋನ್ ಅರ್ವಿನ್ ಡಿಸೋಜ, ಮಂಜುಶ್ರೀ ಜೇಸಿಸ್ ಅಧ್ಯಕ್ಷ ಜಿತೇಶ್, ಬೆಳ್ತಂಗಡಿ ಪತ್ರಕತ೯ರ ಸಂಘದ ಅಧ್ಯಕ್ಷ ತುಕಾರಾಂ, ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಉಮಾ ಆರ್. ರಾವ್, ಮಾಜಿ ಸೈನಿಕರ ಸಂಘದ ಅಧ್ಯಕ್ಷ ಮಹಮ್ಮದ್ ರಫಿ, ಜಾಗದ ದಾನಿ ವೀರಮ್ಮ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಸಂಘದ ಸ್ಥಳ ದಾನಿ ಹಾಗೂ ಆಥಿ೯ಕ ಸಹಕಾರ ನೀಡಿದ ನಿವೃತ್ತ ನೌಕರರನ್ನು ಸನ್ಮಾನಿಸಲಾಯಿತು. ಶ್ರೀಮತಿ ಗೀತಾ ರಮಾನಂದ ರಾವ್ ಪ್ರಾರ್ಥನೆ ಬಳಿಕ ಎಂ.ಎನ್ ಜೋಸೆಫ್ ಸ್ವಾಗತಿಸಿದರು. ಸಮನ್ವಯಕಾರ ವಸಂತ ಸುವರ್ಣ ಧನ್ಯವಾದ ವಿತ್ತರು.

Related posts

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಯೋಗ ಗುರು ಕುಶಾಲಪ್ಪ ಗೌಡರಿಗೆ ಕೆಎನ್ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya
error: Content is protected !!