32.8 C
ಪುತ್ತೂರು, ಬೆಳ್ತಂಗಡಿ
April 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾಭಿವೃದ್ಧಿ ತರಬೇತಿ ಸಮಾರೋಪ

ಉಜಿರೆ : ಉದ್ಯಮದಲ್ಲಿ ಯಶಸ್ಸು ಸಾಧಿಸಲು ನಿಷ್ಠೆ, ಪರಿಶ್ರಮ ಮತ್ತು ಧೈರ್ಯ ಅತ್ಯಂತ ಅಗತ್ಯವೆಂದು ತಿಳಿಸಿದರು. ಡಾ|| ಡಿ ವೀರೇಂದ್ರ ಹೆಗ್ಗಡೆಯವರು ದೂರದರ್ಶಿತ್ವದ ಈ ಸಂಸ್ಥೆಯಲ್ಲಿ ತರಬೇತಿ ಪಡೆದವರು ಸ್ವಉದ್ಯೋಗದತ್ತ ಮುಂದಾಗಿ ಆತ್ಮವಿಶ್ವಾಸದಿಂದ ಕಾರ್ಯನಿರ್ವಹಿಸಬೇಕು ಜೊತೆಗೆ ಒಂದಷ್ಟು ಜನರಿಗೆ ಉದ್ಯೋಗ ಒದಗಿಸಿ, ಗುಣಮಟ್ಟದ ವ್ಯವಹಾರ ನಡೆಸಿ ಎಂದು ಬೆಳ್ತಂಗಡಿಯ ಉದ್ಯಮಿ, ವಿನಾಯಕ ರೈಸ್ ಮಿಲ್ ಮಾಲಕ ಶ್ರೀಕಾಂತ್ ಕಾಮತ್ ಅಭಿಪ್ರಾಯ ಪಟ್ಟರು

ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ವತಿಯಿಂದ ಪ್ರಧಾನಮಂತ್ರಿ ಉದ್ಯೋಗ ಸೃಜನಶೀಲ ಕಾರ್ಯಕ್ರಮ (ಪಿ.ಎಂ.ಇ.ಜಿ.ಪಿ) ಅಡಿಯಲ್ಲಿ ಹಮ್ಮಿಕೊಂಡ ಉದ್ಯಮಶೀಲತಾಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭವು ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ , ಶುಭ ಹಾರೈಸಿದರು

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರುಡ್ ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ.ವಿಜಯಕುಮಾರ್, ಮಾತನಾಡಿ, ತರಬೇತಿಯ ಮೂಲಕ ಪಡೆದ ಕೌಶಲ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿ ಉದ್ಯಮದಲ್ಲಿ ಬೆಳೆಯಬೇಕು ಎಂದು ಪ್ರೇರೇಪಿಸಿದರು.

ಸಂಸ್ಥೆಯ ನಿರ್ದೇಶಕ ಅಜೇಯ ಸ್ವಾಗತಿಸಿದರು, ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ನಿರೂಪಿಸಿದರು. ಸಂಸ್ಥೆಯ ಹಿರಿಯ ಉಪನ್ಯಾಸಕ ಕರುಣಾಕರ್ ಕೆ ಜೈನ್ ವಂದಿಸಿದರು. ಶ್ರೀಮತಿ ನದಿಯ ಮತ್ತು ಬಳಗದವರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮಹಮ್ಮದ್ ಕುಂಞ್ಜ, ಅಮಿತಾ ಲೋಬೋ, ರಾಜೇಶ್ ರೈ ತರಬೇತಿ ಅನುಭವ ಹಂಚಿಕೊಂಡರು.

Related posts

ಮೂಡುಕೋಡಿ: ಆಲಡ್ಕ ನಿವಾಸಿ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮಕಲಶೋತ್ಸವ ಪೂರ್ವಾಭಾವಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!