31.1 C
ಪುತ್ತೂರು, ಬೆಳ್ತಂಗಡಿ
June 17, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೇಣುಬಿಗಿದು ಯುವಕ ಆತ್ಮಹತ್ಯೆಗೆ ಶರಣು: ವಿಷಯ ತಿಳಿದು ತಂದೆ ಕೂಡ ಆತ್ಮಹತ್ಯೆ ಪ್ರಯತ್ನ

ಬೆಳ್ತಂಗಡಿ : ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಚಾರ್ಮಾಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಕೊಡಿಹಿತ್ತಿಲು ನಿವಾಸಿ ಬಾಬುಗೌಡ ಪುತ್ರ ಗಣೇಶ್(20) ಎಂಬಾತ ಎ.25 ರಂದು ಮಧ್ಯಾಹ್ನ 1:30 ಕ್ಕೆ ಮನೆಯ ಗುಡ್ಡದಲ್ಲಿ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಂದೆ ಕೂಡ ಆತ್ಮಹತ್ಯೆಗೆ ಪ್ರಯತ್ನ: ಮನೆಯಲ್ಲಿ ಇಂದು ದನದ ಕೊಟ್ಟಿಯನ್ನು ಸ್ವಚ್ಛ ಮಾಡುತ್ತಿದ್ದು ಏಕಾಏಕಿ ಮನೆಯ ಪಕ್ಕದ ಗುಡ್ಡಕ್ಕೆ ತೆರಳಿ ಗಣೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಮಾಹಿತಿ ತಿಳಿದು ಮೃತಪಟ್ಟ ಗಣೇಶ್ ತಂದೆ ಬಾಬು ಗೌಡ ಕೂಡ ಆತ್ಮಹತ್ಯೆ ಮಾಡಿಕೊಳ್ಳಲು ಗುಡ್ಡಕ್ಕೆ ಹೋದಾಗ ತಕ್ಷಣ ಸ್ಥಳೀಯರು ರಕ್ಷಣೆ ಮಾಡಿ ಬಾಬುಗೌಡರನ್ನು ಮನೆಗೆ ಕರೆದುಕೊಂಡು ಬಂದಿದ್ದಾರೆ ಎನ್ನಲಾಗಿದೆ.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು.‌ಈ ಬಗ್ಗೆ ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಶ್ರೀರಾಮ ಕ್ಷೇತ್ರ ಕನ್ಯಾಡಿಯ ಅಯೋಧ್ಯೆ ಶಾಖಾ ಮಠ ನಿರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇಮಕ

Suddi Udaya

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಚುನಾವಣಾ ಪ್ರಚಾರ

Suddi Udaya

ಬಲ್ಲಾಳರಾಯನ ದುರ್ಗಕ್ಕೆ ಟ್ರಕ್ಕಿಂಗ್ ಬಂದು ಕಾಡಿನ ಮಧ್ಯೆ ದಾರಿ ತಪ್ಪಿದ ಕಾಲೇಜು ವಿದ್ಯಾರ್ಥಿಗಳ ತಂಡ

Suddi Udaya
error: Content is protected !!