25.8 C
ಪುತ್ತೂರು, ಬೆಳ್ತಂಗಡಿ
August 1, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಮಂಜು ಶ್ರೀ ಸೀನಿಯ‌ರ್ ಚೇಂಬರ್‌ ಬೆಳ್ತಂಗಡಿ ಘಟಕ: ಅಧ್ಯಕ್ಷರಾಗಿ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್

ಬೆಳ್ತಂಗಡಿ: ಅಂತಾರಾಷ್ಟ್ರೀಯ ಸೀನಿಯರ್ ಚೇಂಬರ್‌ನ ಮಂಜುಶ್ರೀ ಬೆಳ್ತಂಗಡಿ ಘಟಕದ ಅಧ್ಯಕ್ಷ ಮಂಜುನಾಥ ರೈ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ 2026-27 ಸಾಲಿನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.

ಅಧ್ಯಕ್ಷರಾಗಿ ಸೀನಿಯರ್ ಪಿಪಿಎಫ್ ಜಾನ್ ಅರ್ವಿನ್ ಡಿ’ಸೋಜ, ಕಾರ್ಯದರ್ಶಿಯಾಗಿ ಶರತ್ ಕುಮಾ‌ರ್, ಕೋಶಾಧಿಕಾರಿಯಾಗಿ ಪದ್ಮಕುಮಾರ್, ಜತೆ ಕಾರ್ಯದರ್ಶಿಯಾಗಿ ಹರೀಶ್ ಶೆಟ್ಟಿ, ಉಪಾಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಪಿ. ಮತ್ತು ವಿಲ್ಸನ್ ಗೊನ್ಸಾಲಿಸ್ ಅವಿರೋಧವಾಗಿ ಆಯ್ಕೆಯಾದರು.

ಪದಗ್ರಹಣ ಸಮಾರಂಭ: ಗುರುವಾಯನಕೆರೆ ಛಾಯಾ ಭವನದಲ್ಲಿ ಏ.28 ರಂದು ಸೀನಿಯರ್ ಪಿಪಿಎಫ್ ಮಂಜುನಾಥ ರೈ ಅಧ್ಯಕ್ಷತೆಯಲ್ಲಿ ಪದಗ್ರಹಣ ಸಮಾರಂಭ ಜರುಗಲಿದ್ದು ಅಂತಾರಾಷ್ಟ್ರೀಯ ಸೀನಿಯರ್ ಚೇಂಬರ್ ಉಪಾಧ್ಯಕ್ಷೆ ಪಿಪಿಎಫ್ ಅಕ್ಷತಾ ಆರ್. ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಮತ್ತು ಸದಸ್ಯರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಸುವರ್ಣ ಪ್ರತಿಷ್ಠಾನ ಅಧ್ಯಕ್ಷ ಸಂಪತ್‌ ಬಿ.ಸುವರ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ರಾಷ್ಟ್ರೀಯ ನಿರ್ದೇಶಕ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ಸ್ಥಾಪಕಾಧ್ಯಕ್ಷ ಸೀನಿಯರ್ ಪಿಪಿಎಫ್ ಸಿಎಸ್ಎಲ್ ಪ್ರಮೋದ್ ಆರ್. ನಾಯಕ್ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಬಳಂಜ ಸುವರ್ಣ ನಿಲಯದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಮೈಸೂರಿನಲ್ಲಿ ನಾಪತ್ತೆಯಾಗಿದ್ದ ಸ್ಕೂಟರ್ ಉಜಿರೆಯಲ್ಲಿ ಪತ್ತೆ: ಬೆಳ್ತಂಗಡಿ ಸಂಚಾರಿ ಪೊಲೀಸರಿಂದ ಸ್ಕೂಟರ್ ಪತ್ತೆ ಹಚ್ಚಿ ಮಾಲೀಕರಿಗೆ ಹಸ್ತಾಂತರ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಶನ್ ವತಿಯಿಂದ ಗುರುವಾಯನಕೆರೆ ಡಾ| ವೇಣುಗೋಪಾಲ ಶರ್ಮರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ಮದ್ದಡ್ಕ: ಬೈಕ್ ಮತ್ತು ಸ್ಕೂಟಿ ಅಪಘಾತ

Suddi Udaya
error: Content is protected !!