26.1 C
ಪುತ್ತೂರು, ಬೆಳ್ತಂಗಡಿ
June 12, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿರಾಜ್ಯ ಸುದ್ದಿವರದಿ

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಸಾರಾಂಶ: ದೂರುದಾರರಾದ ಪಿ.ಆರ್.ಮನೋಹರ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ನೀಡಿದ ಪಿರ್ಯಾದಿಯ ಸಾರಾಂಶವೇನೆಂದರೆ ದಿನಾಂಕ: 24.04.2026 ರಂದು 12:30 ಗಂಟೆಗೆ ಮನೋಹರ ಹಾಗೂ ಅವರ ವಕೀಲೆಯಾದ ಟಿಸ್ಮಿ ಮತ್ತು ಶಾಂತಲಾ ರಾಜೇಶ್ ಪ್ರಭು ಹಾಗೂ ಅವರ ಕೆಲಸದವರ ಜೊತೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ಅವರ ಪಟ್ಟಾ ಜಾಗಕ್ಕೆ ಭೇಟಿ ನೀಡಿದಾಗ ಆರೋಪಿದಾರರಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ಶಶಿರಾಜ್ ಶೆಟ್ಟಿ ಇವರುಗಳು ಆಕ್ರಮವಾಗಿ ಪ್ರವೇಶಿಸಿ ಕೈಯಿಂದ ಹಾಗೂ ಲೈಸನ್ಸ್ ಇಲ್ಲದ ಗನ್ ನಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮನೋಹರ್ ನೀಡಿದ ದೂರಿ‌ನ ಮೇರೆಗೆ ಎ.26 ರಂದು ಆರೋಪಿಗಳಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ, ಶಶಿರಾಜ್ ಶೆಟ್ಟಿ ಹಾಗೂ ಇತರರ ಮೇಲೆ BNS- 2023(U/s-189(2),191(2), 115(2), 118(1),329(3),351(2),352,190), ARMS ACT 1959 (U/s-25(1)(A)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಿಲ್ಲವ ಜಾತಿ ಮಾತ್ರ, ಉಪಜಾತಿ ಇಲ್ಲ, ಬಿಲ್ಲವ ಸಮುದಾಯದ ಪ್ರತಿಯೊಬ್ಬರು ಜಾತಿ ಕಾಲಂ ನಂ 9ರಲ್ಲಿ ‘ಬಿಲ್ಲವ ‘ ಎಂದೇ ನಮೂದಿಸಿ: ಪತ್ರಿಕಾಗೋಷ್ಠಿಯಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಹೇಳಿಕೆ

Suddi Udaya

ಇಂದಬೆಟ್ಟು: ಕೋಯ ನಗರದ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡಂಗಡಿ ಗ್ರಾ.ಪಂ. ಸದಸ್ಯ ಹಾಮದ್ ಬಾವ ಹೃದಯಾಘಾತದಿಂದ ನಿಧನ

Suddi Udaya

ಶಿರ್ಲಾಲು: “ಭವತಿ ಭಿಕ್ಷಾಂದೇಹಿ” ನಿಧಿ ಸಂಗ್ರಹ ಅಭಿಯಾನದ ಧನಸಹಾಯ ಹಸ್ತಾಂತರ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya
error: Content is protected !!