July 27, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರತಿಭಟನೆಬೆಳ್ತಂಗಡಿರಾಜ್ಯ ಸುದ್ದಿವರದಿ

ಜಾಗಕ್ಕೆ ಅಕ್ರಮ ಪ್ರವೇಶ ಮಾಡಿ ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ :8 ಮಂದಿ ಆರೋಪಿಗಳ ವಿರುದ್ಧ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಗರ್ಡಾಡಿಯಲ್ಲಿರುವ ಪಟ್ಟಾ ಜಾಗಕ್ಕೆ ಆರೋಪಿಗಳು ಅಕ್ರಮವಾಗಿ ಪ್ರವೇಶ ಮಾಡಿ ಕೈಯಿಂದ ಮತ್ತು ಲೈಸೆನ್ಸ್ ಇಲ್ಲದ ಗನ್ ನಿಂದ ಹಲ್ಲೆ ಮಾಡಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 8 ಮಂದಿ ಆರೋಪಿಗಳ ವಿರುದ್ಧ ಆರ್ಮ್ಸ್ ಆಕ್ಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣದ ಸಾರಾಂಶ: ದೂರುದಾರರಾದ ಪಿ.ಆರ್.ಮನೋಹರ ಎಂಬವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ಬಂದು ನೀಡಿದ ಪಿರ್ಯಾದಿಯ ಸಾರಾಂಶವೇನೆಂದರೆ ದಿನಾಂಕ: 24.04.2026 ರಂದು 12:30 ಗಂಟೆಗೆ ಮನೋಹರ ಹಾಗೂ ಅವರ ವಕೀಲೆಯಾದ ಟಿಸ್ಮಿ ಮತ್ತು ಶಾಂತಲಾ ರಾಜೇಶ್ ಪ್ರಭು ಹಾಗೂ ಅವರ ಕೆಲಸದವರ ಜೊತೆಯಲ್ಲಿ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದಲ್ಲಿರುವ ಅವರ ಪಟ್ಟಾ ಜಾಗಕ್ಕೆ ಭೇಟಿ ನೀಡಿದಾಗ ಆರೋಪಿದಾರರಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ಶಶಿರಾಜ್ ಶೆಟ್ಟಿ ಇವರುಗಳು ಆಕ್ರಮವಾಗಿ ಪ್ರವೇಶಿಸಿ ಕೈಯಿಂದ ಹಾಗೂ ಲೈಸನ್ಸ್ ಇಲ್ಲದ ಗನ್ ನಿಂದ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುತ್ತಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಮನೋಹರ್ ನೀಡಿದ ದೂರಿ‌ನ ಮೇರೆಗೆ ಎ.26 ರಂದು ಆರೋಪಿಗಳಾದ ಗೋಪ ಕುಮಾರ್, ಶ್ರೀಜಾ ಗೋಪ ಕುಮಾರ್, ಸುಮೇಶ್ ಕುಮಾರ್, ಅಂಜಿ ಸುಮೇಶ್ ಕುಮಾ‌ರ್, ರಾಮು ಯಾನೆ ಬಾಬು, ಧೂಮ ಶೆಟ್ಟಿ, ರಿಷಬ್ ಶೆಟ್ಟಿ, ಶಶಿರಾಜ್ ಶೆಟ್ಟಿ ಹಾಗೂ ಇತರರ ಮೇಲೆ BNS- 2023(U/s-189(2),191(2), 115(2), 118(1),329(3),351(2),352,190), ARMS ACT 1959 (U/s-25(1)(A)) ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಕರಂಬಾರು: ಕಾಜಿಮುಗೇರು ಗೇರು ತೋಟಕ್ಕೆ ಬೆಂಕಿ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ಕೊಕ್ಕಡ ಹಳ್ಳಿಂಗೇರಿ ಎರಡು ಮನೆಗಳಿಗೆ ಮರ ಬಿದ್ದು ಹಾನಿ: ಅಪಾರ ನಷ್ಟ

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಗೆ ಅಮೆರಿಕದ ಪೆನ್ಸಿಲ್ವೇನಿಯ ವಿಶ್ವವಿದ್ಯಾಲಯದ ಅಧ್ಯಯನ ತಂಡ ಭೇಟಿ

Suddi Udaya
error: Content is protected !!