36.1 C
ಪುತ್ತೂರು, ಬೆಳ್ತಂಗಡಿ
April 26, 2026
ಧಾರ್ಮಿಕವರದಿ

ಪೊಸರಡ್ಕ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿರ್ಲಾಲು; ಎಪ್ರಿಲ್ 28ರಿಂದ ಮೇ 01ರವರೆಗೆ ನಡೆಯಲಿರುವ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಮರೋಡಿ ಇದರ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ ಶಿರ್ಲಾಲು ಶ್ರೀ ಬ್ರಹ್ಮಬೈದರ್ಕಳ ಗರಡಿ ವಠಾರದಲ್ಲಿ ನಡೆಯಿತು.

ಬ್ರಹ್ಮಕುಂಭಾಭಿಷೇಕ ಸಮಿತಿಯ ಕಾರ್ಯಧ್ಯಕ್ಷರಾದ ನಾರಾಯಣ ಪೂಜಾರಿ ಉಚ್ಚೂರು ಹಾಗೂ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಆದಿತ್ಯ ಪಿ ಕೆ ಇವರು ಬ್ರಹ್ಮಕುಂಭಾಭಿಷೇಕದ ಬಗ್ಗೆ ಮಾಹಿತಿ ನೀಡಿ ಎಲ್ಲರ ಸಹಕಾರ ಕೋರಿದರು. ಶಿರ್ಲಾಲು ಗರಡಿಯ ಗೌರವಾಧ್ಯಕ್ಷರಾದ ರಮಾನಂದ ಗುಡ್ಡಾಜೆ ಸಂದರ್ಭೋಚಿತವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಶಿರ್ಲಾಲು ಗರಡಿ ಆಡಳಿತ ಸಮಿತಿ ಸದಸ್ಯರಾದ ರಮೇಶ್ ಪೂಜಾರಿ ಮಜಲಪಲಿಕೆ ನಂದ ಕುಮಾರ್ ದಿನೇಶ್ ಕರ್ದೊಟ್ಟು ಜೊತೆ ಕಾರ್ಯದರ್ಶಿ ರಮೇಶ್ C A ಬ್ಯಾಂಕ್ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಸೋಮನಾಥ ಬಂಗೇರ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಶಿರ್ಲಾಲು ಅಧ್ಯಕ್ಷರಾದ ಸದಾಶಿವ ಊರ ಜಾತ್ರಾ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ನಾರಾಯಣ ಪೂಜಾರಿ ಕರಂಬಾರು ಶಿವಾನಂದ ಮಜಲ ಪಲಿಕೆ ಕಾರ್ಯದರ್ಶಿ ಪ್ರದೀಪ್ ಪಿಜಕೊಡಂಗೆ ಕೋಶಾಧಿಕಾರಿ ರಕ್ಷಿತ್ ಪಿಜಕೊಡಂಗೆ ಹರೀಶ್ ನೇತ್ರಬೈಲು, ಅಳದಂಗಡಿ ಮೂರ್ತೆದಾರ ಬ್ಯಾಂಕ್ ಪಿಗ್ಮಿ ಸಂಗ್ರಾಹಕರಾದ ಅವಿನಾಶ್ ಕೋಟ್ಯಾನ್ ಯುವವಾಹಿನಿ ಸಂಚಲನಾ ಸಮಿತಿಯ ಮಾಜಿ ಅಧ್ಯಕ್ಷರಾದ ಪ್ರಕಾಶ್ ಕಟ್ರಬೈಲು ಅಧ್ಯಕ್ಷರಾದ ಯತೀಶ್ ಕರಂಬಾರು ಹಾಗೂ ಊರವರು ಉಪಸ್ಥಿತರಿದ್ದರು.

ಆಡಳಿತ ಸಮಿತಿಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಮ್ ಕೆ ಪ್ರಸಾದ್ ಸ್ವಾಗತಿಸಿ ದಿನೇಶ್ ಕರ್ದೊಟ್ಟು ಧನ್ಯವಾದವಿತ್ತರು.

Related posts

ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

Suddi Udaya

ಹಿಂದೂ ಸಂಗಮ ನಿರ್ವಹಣಾ ಸಮಿತಿ ಲಾಯಿಲ ಮಂಡಲದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಮಡಂತ್ಯಾರು: ‘ನೇತ್ರ ವೈದ್ಯರ ನಡೆ ಗ್ರಾಮ ಪಂಚಾಯತ್ ಕಡೆ’ ಯೋಜನಡಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ವಾಣಿ ಶಿಕ್ಷಣ ಸಂಸ್ಥೆ: ಸ್ಕೌಟ್ ಮತ್ತು ಗೈಡ್ಸ್- ಬೇಸಿಗೆ ಶಿಬಿರ

Suddi Udaya

ಶ್ರೀ ರಾಮ ಕ್ಷೇತ್ರ ಕನ್ಯಾಡಿಯ ಸ್ವಾಮೀಜಿ ಯವರಿಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ

Suddi Udaya
error: Content is protected !!